ಬ್ರೇಕಿಂಗ್ ನ್ಯೂಸ್
14-12-20 04:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ತಯಾರಿ ನಡೆಸಿದೆ. ಈಗಾಗ್ಲೇ ಅವಿಶ್ವಾಸ ಗೊತ್ತುವಳಿ ನೋಟೀಸ್ ನೀಡಿದ್ದು, ನಾಳೆ (ಮಂಗಳವಾರ) ನಡೆಯಲಿರುವ ಒಂದು ದಿನದ ಅಧಿವೇಶನದಲ್ಲಿ ಸಭಾಪತಿಯನ್ನು ತೆರವು ಮಾಡುವುದೇ ಬಿಜೆಪಿ ವನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಕಳೆದ ಗುರುವಾರ ಪರಿಷತ್ ಕಲಾಪವನ್ನು ದಿಢೀರ್ ಆಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು. ಪ್ರತಾಪರ ಈ ನಡೆ ಬಿಜೆಪಿಗೆ ಮುಖಕ್ಕೆ ಹೊಡೆದ ರೀತಿ ಆಗಿತ್ತು. ಹೀಗಾಗಿ ವಿಶೇಷ ಸದನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರನ್ನು ಒತ್ತಾಯ ಮಾಡಿತ್ತು. ಅವಿಶ್ವಾಸ ನೋಟೀಸ್ ನೀಡಿ, 15 ದಿನಗಳಾಗಿದ್ದು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿತ್ತು.
ಆದರೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟೀಸ್ ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದರು. ಈ ವಿಧಾನ ಪರಿಷತ್ ಮೂಲಗಳು, ಸಭಾಪತಿಯ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದರೆ, ಅದನ್ನು ಖುದ್ದಾಗಿ ಎದುರಿಸಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಆಗಬೇಕು ಎನ್ನಲಾಗುತ್ತಿದೆ.

ಈ ನಡುವೆ, ಪರಿಷತ್ ಸಭಾಪತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲವನ್ನೂ ಪಡೆದಿದೆ. ಕಾಂಗ್ರೆಸ್- ಜೆಡಿಎಸ್ ಸಂಬಂಧ ಹಳಸಿರುವುದರಿಂದ ಜೆಡಿಎಸ್ ನಾಯಕರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈ ವಿಚಾರ ಪರಿಷತ್ ಸಭಾಪತಿಯನ್ನು ಬದಲಾಯಿಸಲು ಸಹಕಾರ ಆಗಲಿದೆ.
ಈ ನಡುವೆ, ಕಳೆದ ವಾರ ವಿಧಾನಸಭೆ ಅಂಗೀಕರಿಸಿದ್ದ ಗೋಹತ್ಯೆ ವಿಚಾರವೂ ಪರಿಷತ್ ಕಲಾಪದಲ್ಲಿ ಅಂಗೀಕಾರ ಆಗಬೇಕಿದೆ. ಆದರೆ, ಅದನ್ನು ಪರಿಷತ್ ಕಲಾಪದಲ್ಲಿ ಮೊನ್ನೆ ಮಂಡನೆ ಮಾಡಿಲ್ಲ. ಅದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಪರಿಷತ್ತಿನಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯದಿದ್ದರೆ ಕಾನೂನಾಗಿ ಬರುವುದಿಲ್ಲ. ಮುಂದಿನ ಅಧಿವೇಶನಕ್ಕಾಗಿ ಕಾಯಬೇಕಾಗುತ್ತದೆ. ಹೀಗಾಗಿ ಮಂಗಳವಾರದ ಒಂದು ದಿನದ ಅಧಿವೇಶನದಲ್ಲಿ ಬಿಜೆಪಿ ಪಾಲಿಗೆ ಎರಡು ವಿಚಾರವೂ ಮಹತ್ವದ್ದಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಕೂಡ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಮೊದಲಿಗೆ ಮಂಡನೆಯಾಗಿ ಗದ್ದಲ ಏರ್ಪಟ್ಟರೆ, ಕಲಾಪವನ್ನು ಮತ್ತೆ ಮುಂದೂಡುವ ತಂತ್ರವೂ ಅಡಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm