ಬ್ರೇಕಿಂಗ್ ನ್ಯೂಸ್
14-12-20 04:16 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ವಿಧಾನ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ತಯಾರಿ ನಡೆಸಿದೆ. ಈಗಾಗ್ಲೇ ಅವಿಶ್ವಾಸ ಗೊತ್ತುವಳಿ ನೋಟೀಸ್ ನೀಡಿದ್ದು, ನಾಳೆ (ಮಂಗಳವಾರ) ನಡೆಯಲಿರುವ ಒಂದು ದಿನದ ಅಧಿವೇಶನದಲ್ಲಿ ಸಭಾಪತಿಯನ್ನು ತೆರವು ಮಾಡುವುದೇ ಬಿಜೆಪಿ ವನ್ ಲೈನ್ ಅಜೆಂಡಾ ಎನ್ನಲಾಗುತ್ತಿದೆ.
ಕಳೆದ ಗುರುವಾರ ಪರಿಷತ್ ಕಲಾಪವನ್ನು ದಿಢೀರ್ ಆಗಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು. ಪ್ರತಾಪರ ಈ ನಡೆ ಬಿಜೆಪಿಗೆ ಮುಖಕ್ಕೆ ಹೊಡೆದ ರೀತಿ ಆಗಿತ್ತು. ಹೀಗಾಗಿ ವಿಶೇಷ ಸದನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರನ್ನು ಒತ್ತಾಯ ಮಾಡಿತ್ತು. ಅವಿಶ್ವಾಸ ನೋಟೀಸ್ ನೀಡಿ, 15 ದಿನಗಳಾಗಿದ್ದು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದು ರಾಜ್ಯಪಾಲರನ್ನು ಒತ್ತಾಯಿಸಿತ್ತು.
ಆದರೆ, ಪ್ರತಾಪಚಂದ್ರ ಶೆಟ್ಟಿ ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿ ನೋಟೀಸ್ ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಹೇಳಿದ್ದರು. ಈ ವಿಧಾನ ಪರಿಷತ್ ಮೂಲಗಳು, ಸಭಾಪತಿಯ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಯಾದರೆ, ಅದನ್ನು ಖುದ್ದಾಗಿ ಎದುರಿಸಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಆಗಬೇಕು ಎನ್ನಲಾಗುತ್ತಿದೆ.

ಈ ನಡುವೆ, ಪರಿಷತ್ ಸಭಾಪತಿ ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ಬೆಂಬಲವನ್ನೂ ಪಡೆದಿದೆ. ಕಾಂಗ್ರೆಸ್- ಜೆಡಿಎಸ್ ಸಂಬಂಧ ಹಳಸಿರುವುದರಿಂದ ಜೆಡಿಎಸ್ ನಾಯಕರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಈ ವಿಚಾರ ಪರಿಷತ್ ಸಭಾಪತಿಯನ್ನು ಬದಲಾಯಿಸಲು ಸಹಕಾರ ಆಗಲಿದೆ.
ಈ ನಡುವೆ, ಕಳೆದ ವಾರ ವಿಧಾನಸಭೆ ಅಂಗೀಕರಿಸಿದ್ದ ಗೋಹತ್ಯೆ ವಿಚಾರವೂ ಪರಿಷತ್ ಕಲಾಪದಲ್ಲಿ ಅಂಗೀಕಾರ ಆಗಬೇಕಿದೆ. ಆದರೆ, ಅದನ್ನು ಪರಿಷತ್ ಕಲಾಪದಲ್ಲಿ ಮೊನ್ನೆ ಮಂಡನೆ ಮಾಡಿಲ್ಲ. ಅದು ಕೂಡ ಬಿಜೆಪಿ ಪಾಲಿಗೆ ಮಹತ್ವದ್ದಾಗಿದ್ದು, ಪರಿಷತ್ತಿನಲ್ಲಿ ಮಂಡನೆಯಾಗಿ ಅನುಮೋದನೆ ಪಡೆಯದಿದ್ದರೆ ಕಾನೂನಾಗಿ ಬರುವುದಿಲ್ಲ. ಮುಂದಿನ ಅಧಿವೇಶನಕ್ಕಾಗಿ ಕಾಯಬೇಕಾಗುತ್ತದೆ. ಹೀಗಾಗಿ ಮಂಗಳವಾರದ ಒಂದು ದಿನದ ಅಧಿವೇಶನದಲ್ಲಿ ಬಿಜೆಪಿ ಪಾಲಿಗೆ ಎರಡು ವಿಚಾರವೂ ಮಹತ್ವದ್ದಾಗಿದೆ. ಇದೇ ವೇಳೆ, ಕಾಂಗ್ರೆಸ್ ನಾಯಕರು ಕೂಡ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಮೊದಲಿಗೆ ಮಂಡನೆಯಾಗಿ ಗದ್ದಲ ಏರ್ಪಟ್ಟರೆ, ಕಲಾಪವನ್ನು ಮತ್ತೆ ಮುಂದೂಡುವ ತಂತ್ರವೂ ಅಡಗಿದೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm