ಬ್ರೇಕಿಂಗ್ ನ್ಯೂಸ್
            
                        06-12-24 08:22 pm HK News Desk ಕರ್ನಾಟಕ
            ಹುಬ್ಬಳ್ಳಿ: "ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ. ಇತ್ತ ಡಿಸಿಎಂ ಡಿಕೆಶಿ ಫೆವಿಕಾಲ್ ಕಿತ್ತು ತೆಗೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಬಿಜೆಪಿ ಸಂಸದ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಎಲ್ಲವನ್ನೂ ಇವರಿಬ್ಬರೇ ಮಾಡಿದರೆ, ನಮ್ಮದೇನು ಪಾತ್ರ ಎನ್ನುವ ಆತಂಕ ಗೃಹ ಸಚಿವರಿಗಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ. ಯಾವ ಪುರುಷಾರ್ಥಕ್ಕೆ ಹಾಸನದಲ್ಲಿ ಸಮಾವೇಶ ಮಾಡಿದರು?. ಜನಕಲ್ಯಾಣ ಮಾಡಲಿ ಅಂತ ಜನ ಅಧಿಕಾರ ಕೊಟ್ಟರೆ, ಕಾಂಗ್ರೆಸ್ ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯಾಲಯದಲ್ಲಿ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ, ಎಲ್ಲದರಲ್ಲೂ ಜೀರೋ. ಹಣಕಾಸಿನ ದಿವಾಳಿ ಮಾಡಿ, ಅಭಿವೃದ್ಧಿ ಶೂನ್ಯವಾಗಿದೆ" ಎಂದರು.
"ಕಾಂಗ್ರೆಸ್ ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ. ಕೋರ್ಟ್ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸರ್ಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಅದೇ ದುಡ್ಡನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ನಿಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ" ಎಂದು ದೂರಿದರು.
ವಕ್ಫ್ ವಿರುದ್ಧ ಬಿಜೆಪಿ ಹೋರಾಟ ನಾಟಕ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ. ವಿರೋಧ ಪಕ್ಷವಾಗಿ ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ. ಸಿಎಂಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ" ಎಂದರು.
ಕೇಂದ್ರದಿಂದ 10 ಕೆ.ಜಿ ಅಕ್ಕಿ ಕೊಟ್ಟಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "10 ಕೆಜಿ ಕೊಡುತ್ತಿದ್ದೇವೆ ಅಂತ ನಾವೆಲ್ಲೂ ಹೇಳಿಲ್ಲ. ಕಾಂಗ್ರೆಸ್ನವರೇ 10 ಕೆ.ಜಿ ಕೊಡುವುದಾಗಿ ಹೇಳಿದ್ದರು. ಆದರೆ ಒಂದಗಳು ಅಕ್ಕಿಯನ್ನೂ ರಾಜ್ಯ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಅಕ್ಕಿ ಕೊಡುತ್ತಿದೆ ಅಂತ ಹೇಳಲು ಇವರಿಗೆ ನಾಚಿಕೆ" ಎಂದು ಹೇಳಿದರು
            
            
            CM Siddaramaiah sat like Fevicol on CM seat says Bommai in Hubballi on the other hand DK shivakumar is been waiting to sit in the CM thrown
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm