ಬ್ರೇಕಿಂಗ್ ನ್ಯೂಸ್
06-12-24 08:22 pm HK News Desk ಕರ್ನಾಟಕ
ಹುಬ್ಬಳ್ಳಿ: "ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಳಬೇಗುದಿ ಇದೆ. ಡಿಸಿಎಂ, ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ. ಆದರೆ ಸಿದ್ದರಾಮಯ್ಯ ಸಿಎಂ ಕುರ್ಚಿಗೆ ಫೆವಿಕಾಲ್ ಹಾಕಿಕೊಂಡು ಕುಳಿತಿದ್ದಾರೆ. ಇತ್ತ ಡಿಸಿಎಂ ಡಿಕೆಶಿ ಫೆವಿಕಾಲ್ ಕಿತ್ತು ತೆಗೆಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಬಿಜೆಪಿ ಸಂಸದ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, "ಎಲ್ಲವನ್ನೂ ಇವರಿಬ್ಬರೇ ಮಾಡಿದರೆ, ನಮ್ಮದೇನು ಪಾತ್ರ ಎನ್ನುವ ಆತಂಕ ಗೃಹ ಸಚಿವರಿಗಿದೆ. ಬರುವ ದಿನಗಳಲ್ಲಿ ಇದು ದೊಡ್ಡ ಸ್ವರೂಪ ಪಡೆಯುತ್ತದೆ. ಈ ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ. ಯಾವ ಪುರುಷಾರ್ಥಕ್ಕೆ ಹಾಸನದಲ್ಲಿ ಸಮಾವೇಶ ಮಾಡಿದರು?. ಜನಕಲ್ಯಾಣ ಮಾಡಲಿ ಅಂತ ಜನ ಅಧಿಕಾರ ಕೊಟ್ಟರೆ, ಕಾಂಗ್ರೆಸ್ ಜನಕಲ್ಯಾಣ ಮರೆತು ಸಮಾವೇಶದಲ್ಲಿ ಮುಳುಗಿದ್ದಾರೆ. ರಾಜ್ಯದ ಹಣಕಾಸನ್ನು ಇವರು ದಿವಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಇರುವುದು ಜೀರೋ ಸರ್ಕಾರ. ಅಭಿವೃದ್ಧಿಯಲ್ಲಿ, ಸಾಮಾಜಿಕ ನ್ಯಾಯಾಲಯದಲ್ಲಿ, ಕಾನೂನು ವ್ಯವಸ್ಥೆ ಕಾಪಾಡುವಲ್ಲಿ, ಎಲ್ಲದರಲ್ಲೂ ಜೀರೋ. ಹಣಕಾಸಿನ ದಿವಾಳಿ ಮಾಡಿ, ಅಭಿವೃದ್ಧಿ ಶೂನ್ಯವಾಗಿದೆ" ಎಂದರು.
"ಕಾಂಗ್ರೆಸ್ ಹೆಜ್ಜೆ ಹೆಜ್ಜೆಗೂ ಹಗರಣಗಳನ್ನು ಮಾಡುತ್ತಿದೆ. ಕೋರ್ಟ್ನಲ್ಲಿ ನಡೆಯುತ್ತಿರುವ ಕೇಸ್ ಮೇಲೆ ಪ್ರಭಾವ ಬೀರಲು ಸರ್ಕಾರಿ ದುಡ್ಡಿನಲ್ಲಿ ಸಮಾವೇಶ ಆಯೋಜನೆ ಮಾಡಲಾಗುತ್ತಿದೆ. ಅದೇ ದುಡ್ಡನ್ನು ಅಭಿವೃದ್ಧಿಗೆ ಬಳಕೆ ಮಾಡಬಹುದಿತ್ತು. ನಿಮಗೆ ಆನೆ ಬಲ ತುಂಬಿಕೊಳ್ಳುವುದಲ್ಲ. ಜನರಿಗೆ ಆನೆ ಬಲ ತುಂಬುವ ಕೆಲಸ ಆಗಬೇಕಿದೆ. ಅಸ್ಥಿರತೆಯಲ್ಲಿ ಸಿದ್ದರಾಮಯ್ಯ ಕಾಲ ದೂಡುತ್ತಿದ್ದಾರೆ" ಎಂದು ದೂರಿದರು.
ವಕ್ಫ್ ವಿರುದ್ಧ ಬಿಜೆಪಿ ಹೋರಾಟ ನಾಟಕ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಅವರು, "ಸಿಎಂ ದೊಡ್ಡಾಟದ ಪ್ರಮುಖ ಪಾತ್ರಧಾರಿ. ವಿರೋಧ ಪಕ್ಷವಾಗಿ ಸರ್ಕಾರದ ತಪ್ಪುಗಳನ್ನು ಪ್ರಶ್ನಿಸುವುದು ನಮ್ಮ ಕೆಲಸ. ಸಿಎಂಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ" ಎಂದರು.
ಕೇಂದ್ರದಿಂದ 10 ಕೆ.ಜಿ ಅಕ್ಕಿ ಕೊಟ್ಟಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂಬ ಸಿಎಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, "10 ಕೆಜಿ ಕೊಡುತ್ತಿದ್ದೇವೆ ಅಂತ ನಾವೆಲ್ಲೂ ಹೇಳಿಲ್ಲ. ಕಾಂಗ್ರೆಸ್ನವರೇ 10 ಕೆ.ಜಿ ಕೊಡುವುದಾಗಿ ಹೇಳಿದ್ದರು. ಆದರೆ ಒಂದಗಳು ಅಕ್ಕಿಯನ್ನೂ ರಾಜ್ಯ ಸರ್ಕಾರ ಕೊಡುತ್ತಿಲ್ಲ. ಕೇಂದ್ರ ಅಕ್ಕಿ ಕೊಡುತ್ತಿದೆ ಅಂತ ಹೇಳಲು ಇವರಿಗೆ ನಾಚಿಕೆ" ಎಂದು ಹೇಳಿದರು
CM Siddaramaiah sat like Fevicol on CM seat says Bommai in Hubballi on the other hand DK shivakumar is been waiting to sit in the CM thrown
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm