ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm