ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm