ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm