ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am