ಬ್ರೇಕಿಂಗ್ ನ್ಯೂಸ್
09-12-24 02:51 pm HK News Desk ಕರ್ನಾಟಕ
ಹಾಸನ, ಡಿ.9: ಎತ್ತಿನಹೊಳೆ ಯೋಜನೆಯ ಭೂಸ್ವಾಧೀನಕ್ಕೆ ಪರಿಹಾರ ವಿಳಂಬವಾಗಿದ್ದರಿಂದ ಮನನೊಂದ ರೈತನೊಬ್ಬ ಎತ್ತಿನಹೊಳೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ, ವಡ್ಡರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಸ್ವಾಮಿ (64) ಆತ್ಮಹತ್ಯೆ ಮಾಡಿಕೊಂಡ ರೈತ. ಪರಿಹಾರದ ಹಣ ನೀಡುವಂತೆ ಎರಡು ದಿನಗಳ ಹಿಂದೆ ಎತ್ತಿನಹೊಳೆ ಇಂಜಿನಿಯರ್ ಜೊತೆ ರಂಗಸ್ವಾಮಿ ಜಗಳವಾಡಿದ್ದು ಅಧಿಕಾರಿ ಬೈದು ಹಿಂದಕ್ಕೆ ಕಳಿಸಿದ್ದ ಎನ್ನಲಾಗಿದೆ. ಎತ್ತಿನಹೊಳೆ ಯೋಜನೆಗೆ ರಂಗಸ್ವಾಮಿ ಅವರು 1 ಎಕರೆ 32 ಗುಂಟೆ ಜಮೀನು ಕಳೆದುಕೊಂಡಿದ್ದರು. ಆದರೆ ಇದುವರೆಗೂ ನಯಾಪೈಸೆ ಪರಿಹಾರ ನೀಡದೇ ಸತಾಯಿಸಿದ್ದರಿಂದ ಮನನೊಂದಿದ್ದರು. ಪರಿಹಾರದ ಹಣ ನಂಬಿ ಸಾಲವನ್ನೂ ಮಾಡಿಕೊಂಡಿದ್ದರು. ಸಾಲದ ಹಣ ಕೊಟ್ಟವರು ಹಣ ಹಿಂತಿರುಗಿಸುವಂತೆ ಒತ್ತಾಯ ಮಾಡುತ್ತಿದ್ದರು.
ಇದೇ ವೇಳೆ, ಎತ್ತಿನಹೊಳೆ ಇಂಜಿನಿಯರ್ ಪರಿಹಾರದ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಸಂಬಂಧಿಕರು ಆರೋಪ ಮಾಡಿದ್ದಾರೆ. ಇಂದು ಬೆಳಗ್ಗೆ ಎತ್ತಿನಹೊಳೆ ಯೋಜನೆ ಕಾಲುವೆಯಲ್ಲಿ ರಂಗಸ್ವಾಮಿ ಮೃತದೇಹ ತೇಲುತ್ತಿರುವುದು ಪತ್ತೆಯಾಗಿತ್ತು. ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿತ ಎತ್ತಿನಹೊಳೆ ಯೋಜನೆ ಇಂಜಿನಿಯರ್ ಸ್ಥಳಕ್ಕೆ ಆಗಮಿಸಬೇಕೆಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರ ಪಟ್ಟು ಹಿಡಿದಿದ್ದಾರೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Yettinahole project, 64 year old farmer commits suicide after no compensation on land, demand for bribe by enginner in Hassan. The deceased has been identified as Rangaswami.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm