ಬ್ರೇಕಿಂಗ್ ನ್ಯೂಸ್
11-12-24 04:45 pm HK News Desk ಕರ್ನಾಟಕ
ಕೋಲಾರ, ಡಿ 11: ಮುರುಡೇಶ್ವರ ಬೀಚ್ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲು ಅಮಾನತುಗೊಂಡಿದ್ದು, ಐವರು ಅತಿಥಿ ಶಿಕ್ಷಕರನ್ನು ವಜಾ ಮಾಡಿ, ಗ್ರೂಪ್ ಡಿ ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ.
ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದಾಗ ನಾಲ್ವರು ವಿದ್ಯಾರ್ಥಿನಿಯರು ಮಂಗಳವಾರ ಸಮುದ್ರಪಾಲಾಗಿದ್ದರು. ಮುಳಬಾಗಲು ತಾಲೂಕಿನ ಪೂಜಾರಹಳ್ಳಿ ಶ್ರಾವಂತಿ(15), ಎನ್.ಗಡ್ಡೂರು ದೀಕ್ಷಾ(15), ದೊಡ್ಡಗುಟ್ಟಳ್ಳಿ ವಂದನಾ(15) ಮತ್ತು ಹೆಬ್ಬಣಿ ಗ್ರಾಮದ ಲಾವಣ್ಯ(15) ಮೃತರು.


ಸಮುದ್ರಕ್ಕಿಳಿದಿದ್ದ ಏಳು ಬಾಲಕಿಯರ ಪೈಕಿ ನಾಲ್ವರು ನೀರುಪಾಲಾಗಿದ್ದರು. ಇನ್ನುಳಿದ ಬಾಳಸಂದ್ರ ವೀಕ್ಷಣಾ(15), ತಾತಿಘಟ್ಟ ಯಶೋಧಾ(15) ಹಾಗೂ ಕಲಿಕೇರಿ ಲಿಪಿತಾ(15) ಅವರನ್ನು ರಕ್ಷಣೆ ಮಾಡಿ ಮುರುಡೇಶ್ವರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಸತಿ ಶಾಲೆಯ 46 ಮಕ್ಕಳು 2 ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ 8 ರಂದು ಭಾನುವಾರ ರಾತ್ರಿ 9 ಗಂಟೆಗೆ ಕೊತ್ತೂರಿನಿಂದ ನಿರ್ಗಮಿಸಿದ್ದರು. 9 ರಂದು ಬೆಳಗ್ಗೆ ಬನವಾಸಿ, ಶಿರಸಿ ನೋಡಿಕೊಂಡು ರಾತ್ರಿ ಗೋಕರ್ಣದಲ್ಲಿ ತಂಗಿದ್ದರು. 10ರಂದು ಮಂಗಳವಾರ ಮಧ್ಯಾಹ್ನ 1.30ಕ್ಕೆ ಮುರುಡೇಶ್ವರ ತಲುಪಿದ್ದು, ಸಂಜೆ 5 ಗಂಟೆಗೆ ದುರ್ಘಟನೆ ಸಂಭವಿಸಿತ್ತು.
ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ;
ಕರ್ತವ್ಯಲೋಪ, ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಿನ್ಸಿಪಾಲ್ ಮಹರ್ ಶಶಿಕಲಾ ಅವರನ್ನ ಸೇವೆಯಿಂದ ಅಮಾನತು ಮಾಡಲಾಗಿದ್ದು, ಅತಿಥಿ ಶಿಕ್ಷಕರಾದ ಶಾರದಮ್ಮ, ಚೌಡಪ್ಪ, ನರೇಶ್, ವಿಶ್ವನಾಥ್, ಸುನೀಲ್ ವಜಾಗೊಂಡಿದ್ದು ಹಾಗೂ ಗ್ರೂಪ್ ಡಿ ಸಿಬ್ಬಂದಿ ಲಕ್ಷ್ಮಮ್ಮ ಅವರನ್ನು ಸೇವೆಯಿಂದ ಬಿಡುಗಡೆ ಮಾಡಲಾಗಿದೆ. ಅಂತೆಯೇ ಮೃತಪಟ್ಟ ಬಾಲಕಿಯರ ಪೋಷಕರಿಗೆ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.
ಮೃತ ನಾಲ್ವರು ಬಾಲಕಿಯರೂ 15 ವರ್ಷದವರಾಗಿದ್ದು 9ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿದ್ದರು ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎಸ್.ಕಾಂತರಾಜು ತಿಳಿಸಿದ್ದಾರೆ.
Four Students Drown During Educational Tour in Murdeshwar, 6 teachers including principle of the school suspended in kolar. The Murudeshwar police said a group of 44 students and six teachers of the school had come to Murudeshwar on Tuesday as part of the annual school tour. In the evening, the group came to the beach. Despite a warning by lifeguards, a few students got into the sea.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm