ಬ್ರೇಕಿಂಗ್ ನ್ಯೂಸ್
11-12-24 07:28 pm HK News Desk ಕರ್ನಾಟಕ
ಮಂಡ್ಯ, ಡಿ 11: ನಿನ್ನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯಿತು.
ಪಂಚಭೂತಗಳಲ್ಲಿ ಲೀನವಾದ ಎಸ್ಎಂಕೆ


ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಂತ್ಯಕ್ರಿಯೆಯ ಸಾಂಪ್ರಾದಾಯಿಕ ವಿಧಿವಿಧಾನ ಕಾರ್ಯ ನಡೆಯಿತು. ಮೊದಲು ಪುಣ್ಯಾಹ, ಬಳಿಕ ಪಂಚಗವ್ಯ, ಸ್ನಾನ, ಸ್ನಾನದ ಬಳಿಕ ಕರ್ಣ ಮಂತ್ರ ಪಾರಾಯಣ, ಉತ್ಕ್ರಾಂತ ತಿಲಪಾತ್ರ ದಾನ, ಗೋದಾನ, ದಶದಾನ ಮಾಡಲಾಯಿತು. ಆ ಬಳಿಕ ಪಾರ್ಥೀವ ಶರೀರಕ್ಕೆ ಮೊಮ್ಮಗ ಅಮೃರ್ತ್ಯ ಹೆಗಡೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾದರು.



ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ.

ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ
ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅವರ ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ ನಡೆಸಲಾಯಿತು. ಈತ ಬೇರೆಯಾರೂ ಅಲ್ಲ ಉದ್ಯಮಿ ಸಿದ್ದಾರ್ಥ ಅವರ ಪುತ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯನೇ ಅಮಾರ್ಥ್ಯ ಹೆಗ್ಡೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದ ಕೃಷ್ಣ
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
The mortal remains of former chief minister S M Krishna, who passed away due to an illness in Bengaluru, on Tuesday, was brought to his native Somanahalli, in Maddur taluk, Mandya district, on Wednesday afternoon.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm