ಬ್ರೇಕಿಂಗ್ ನ್ಯೂಸ್
11-12-24 07:28 pm HK News Desk ಕರ್ನಾಟಕ
ಮಂಡ್ಯ, ಡಿ 11: ನಿನ್ನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯಿತು.
ಪಂಚಭೂತಗಳಲ್ಲಿ ಲೀನವಾದ ಎಸ್ಎಂಕೆ


ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಂತ್ಯಕ್ರಿಯೆಯ ಸಾಂಪ್ರಾದಾಯಿಕ ವಿಧಿವಿಧಾನ ಕಾರ್ಯ ನಡೆಯಿತು. ಮೊದಲು ಪುಣ್ಯಾಹ, ಬಳಿಕ ಪಂಚಗವ್ಯ, ಸ್ನಾನ, ಸ್ನಾನದ ಬಳಿಕ ಕರ್ಣ ಮಂತ್ರ ಪಾರಾಯಣ, ಉತ್ಕ್ರಾಂತ ತಿಲಪಾತ್ರ ದಾನ, ಗೋದಾನ, ದಶದಾನ ಮಾಡಲಾಯಿತು. ಆ ಬಳಿಕ ಪಾರ್ಥೀವ ಶರೀರಕ್ಕೆ ಮೊಮ್ಮಗ ಅಮೃರ್ತ್ಯ ಹೆಗಡೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾದರು.



ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ.

ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ
ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅವರ ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ ನಡೆಸಲಾಯಿತು. ಈತ ಬೇರೆಯಾರೂ ಅಲ್ಲ ಉದ್ಯಮಿ ಸಿದ್ದಾರ್ಥ ಅವರ ಪುತ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯನೇ ಅಮಾರ್ಥ್ಯ ಹೆಗ್ಡೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದ ಕೃಷ್ಣ
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
The mortal remains of former chief minister S M Krishna, who passed away due to an illness in Bengaluru, on Tuesday, was brought to his native Somanahalli, in Maddur taluk, Mandya district, on Wednesday afternoon.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm