ಬ್ರೇಕಿಂಗ್ ನ್ಯೂಸ್
11-12-24 07:28 pm HK News Desk ಕರ್ನಾಟಕ
ಮಂಡ್ಯ, ಡಿ 11: ನಿನ್ನೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ ಇಹಲೋಕ ತ್ಯಜಿಸಿದ್ದಾರೆ. ಇಂದು ಅವರ ಹುಟ್ಟೂರಾದ ಮಂಡ್ಯ ಜಿಲ್ಲೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು. ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರ ಪಂಚಭೂತಗಳಲ್ಲಿ ಲೀನವಾಯಿತು.
ಪಂಚಭೂತಗಳಲ್ಲಿ ಲೀನವಾದ ಎಸ್ಎಂಕೆ


ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯದ ಪ್ರಕಾರ ಭಾನು ಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಅಂತ್ಯಕ್ರಿಯೆಯ ಸಾಂಪ್ರಾದಾಯಿಕ ವಿಧಿವಿಧಾನ ಕಾರ್ಯ ನಡೆಯಿತು. ಮೊದಲು ಪುಣ್ಯಾಹ, ಬಳಿಕ ಪಂಚಗವ್ಯ, ಸ್ನಾನ, ಸ್ನಾನದ ಬಳಿಕ ಕರ್ಣ ಮಂತ್ರ ಪಾರಾಯಣ, ಉತ್ಕ್ರಾಂತ ತಿಲಪಾತ್ರ ದಾನ, ಗೋದಾನ, ದಶದಾನ ಮಾಡಲಾಯಿತು. ಆ ಬಳಿಕ ಪಾರ್ಥೀವ ಶರೀರಕ್ಕೆ ಮೊಮ್ಮಗ ಅಮೃರ್ತ್ಯ ಹೆಗಡೆ ಅಗ್ನಿ ಸ್ಪರ್ಶ ಮಾಡಿದರು. ಈ ಮೂಲಕ ಎಸ್ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾದರು.



ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ
ಅಂತ್ಯಸಂಸ್ಕಾರದ ಸ್ಥಳದಲ್ಲಿ ಗಣ್ಯರಿಗೆ ಸಾರ್ವಜನಿಕರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30 ಗಂಟೆಗೆಯಿಂದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಾನು ಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ ನಡೆಸಲಾಯಿತು. ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನೆರೆವೇರಿಸಲಾಯಿತು. ಅಂತ್ಯ ಸಂಸ್ಕಾರಕ್ಕೆ 1 ಸಾವಿರ ಕೆಜಿ ಶ್ರೀಗಂಧ ಬಳಕೆ ಮಾಡಲಾಯಿತು. 300 ಕೆಜಿ ಸೇವಂತಿಗೆ, ಗುಲಾಬಿ ಹಾಗೂ ಚೆಂಡು ಹೂವು ಬಳಕೆ ಮಾಡಲಾಗಿದೆ.

ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ
ಎಸ್ಎಂ ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಅವರ ಮೊಮ್ಮಗ ಅಮಾರ್ಥ್ಯ ಹೆಗ್ಡೆ ಅವರಿಂದ ಅಂತ್ಯಕ್ರಿಯೆ ನಡೆಸಲಾಯಿತು. ಈತ ಬೇರೆಯಾರೂ ಅಲ್ಲ ಉದ್ಯಮಿ ಸಿದ್ದಾರ್ಥ ಅವರ ಪುತ್ರ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯನೇ ಅಮಾರ್ಥ್ಯ ಹೆಗ್ಡೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದ ಕೃಷ್ಣ
ಎಸ್ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
The mortal remains of former chief minister S M Krishna, who passed away due to an illness in Bengaluru, on Tuesday, was brought to his native Somanahalli, in Maddur taluk, Mandya district, on Wednesday afternoon.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am