ಬ್ರೇಕಿಂಗ್ ನ್ಯೂಸ್
12-12-24 10:36 pm HK News Desk ಕರ್ನಾಟಕ
ಕಾರ್ಕಳ, ಡಿ.12: ಶಬರಿಮಲೆಗೆ ಲಕ್ಷಾಂತರ ಹಿಂದೂ ಭಕ್ತರು ಪ್ರತಿ ವರ್ಷ ಮಾಲಾಧಾರಿಯಾಗಿ ವ್ರತ ನಿಷ್ಠರಾಗಿ ತೆರಳುವುದು ವಾಡಿಕೆ. ಕಾರ್ಕಳ ತಾಲೂಕಿನ ಸಂಕಲಕರಿಯ ಗ್ರಾಮದ ಗೋಕುಲನಗರ ನಿವಾಸಿ ಆಜಿತ್ ಸೆರಾವೋ ಎಂಬ ಕ್ರೈಸ್ತ ಯುವಕನೂ ಅಯ್ಯಪ್ಪನ ಭಕ್ತಿಯಲ್ಲಿ ಮಾಲಾಧಾರಿಯಾಗಿ ತೆರಳುವುದನ್ನು ವಾಡಿಕೆ ಮಾಡಿದ್ದಾನೆ.
ದಿ. ವಿಲಿಯಂ ಸೆರಾವೋ, ದುಲ್ಸಿನ್ ಸೆರಾವೋ ದಂಪತಿಯ ಅವಳಿ ಗಂಡು ಮಕ್ಕಳಲ್ಲಿ ಓರ್ವನಾದ ಅಜಿತ್ 18 ವರ್ಷಗಳಿಂದ ಶಬರಿಮಲೆ ಯಾತ್ರೆ ಮಾಡುತ್ತಿದ್ದಾರೆ. ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್ ಆಗಿರುವ ಅಜಿತ್, 18 ವರ್ಷಗಳ ಹಿಂದೆ ಪೊಳಲಿಯ ಗುರುಸ್ವಾಮಿಯೋರ್ವರಿಂದ ಪ್ರಭಾವಿತರಾಗಿ ಮಾಲೆ ಧರಿಸಿದ್ದರು.
ಆನಂತರ, ಕೊರೊನಾ ಸಂದರ್ಭದಲ್ಲೂ ಅಯ್ಯಪ್ಪನ ಯಾತ್ರೆ ಹೋಗುವುದನ್ನು ತಪ್ಪಿಸಲಿಲ್ಲ. ಅಜಿತ್ ಹಿಂದಿನ 17 ವರ್ಷಗಳಲ್ಲಿ 5 ಬಾರಿ ದಟ್ಟ ಕಾನನ ದಾರಿಯಲ್ಲಿ ನಡೆದುಕೊಂಡೇ ಸಾಗಿ ಅಯ್ಯಪ್ಪನ ದರ್ಶನ ಮಾಡಿದ್ದರು. ತಂದೆ ತೀರಿಕೊಂಡ ವರ್ಷದಲ್ಲಿ ಮಾತ್ರ ಮಾಲೆ ಧರಿಸಿರಲಿಲ್ಲ.
ತನ್ನ ಈ ಪುಣ್ಯ ಕಾರ್ಯಕ್ಕೆ ಮನೆಯವರು, ನೆರೆಹೊರೆಯವರು ಸಹಿತ ಎಲ್ಲ ಧರ್ಮದವರ ಬೆಂಬಲವಿದೆ. ಅಯ್ಯಪ್ಪನ ಮೇಲಿನ ಅಚಲ ವಿಶ್ವಾಸ ನನ್ನದು. ವ್ಯಸನ ಮುಕ್ತನಾಗಿ ಬದುಕಲು ಈ ಮಾಲಾಧಾರಿಯಾಗಿ ವ್ರತ ನಿಷ್ಠನಾಗುತ್ತೇನೆ ಎನ್ನುತ್ತಾರೆ ಅಜಿತ್ ಸೆರಾವೋ. ಪ್ರತಿ ವರ್ಷ ಮಕರ ಜ್ಯೋತಿಯಂದು ಅಜಿತ್ ಶಬರಿಮಲೆಗೆ ತೆರಳಿ ಅಯ್ಯಪ್ಪ ಜ್ಯೋತಿಯನ್ನು ಕಣ್ತುಂಬಿಕೊಳ್ಳುತ್ತಾರೆ.
It is a tradition for lakhs of Hindu devotees to visit Sabarimala every year as Maladharis to observe the fast. Ajit Serao, a Christian youth from Gokulnagar, Sankalkaria village in Karkala taluk, has also made it a habit to visit as Maladhari in devotion to Lord Ayyappa.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm