ಬ್ರೇಕಿಂಗ್ ನ್ಯೂಸ್
14-12-24 05:46 pm HK News Desk ಕರ್ನಾಟಕ
ಮಂಜೇಶ್ವರ, ಡಿ.14: ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿಯಾಗಿದ್ದ ಉಪ್ಪಳ ಪ್ರತಾಪನಗರ ನಿವಾಸಿ, ಉತ್ಸಾಹಿ ಕಾರ್ಯಕರ್ತ ಧನರಾಜ್ (44) ರಸ್ತೆ ಅಪಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ. ಶನಿವಾರ ಮಧ್ಯಾಹ್ನ ಬಂದ್ಯೋಡಿನಲ್ಲಿ ಬಿಜೆಪಿ ಮೀಟಿಂಗ್ ಮುಗಿಸಿ ಮನೆ ಕಡೆಗೆ ಹಿಂತಿರುಗುತ್ತಿದ್ದಾಗ ಇವರ ಬೈಕಿಗೆ ಕಾರು ಡಿಕ್ಕಿಯಾಗಿ ಸಾವು ಕಂಡಿದ್ದಾರೆ.
ಬಂದ್ಯೋಡು ಶಿರಿಯಾದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಏಕಮುಖದ ರಸ್ತೆಯಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಲಾಗಿತ್ತು. ಇದರಿಂದಾಗಿ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಧನರಾಜ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಈ ಹಿಂದೆ ಮಂಗಳೂರು- ಕಾಸರಗೋಡು ಮಧ್ಯೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕಂಡಕ್ಟರ್ ಆಗಿದ್ದ ಧನರಾಜ್ 2-3 ವರ್ಷಗಳಿಂದ ಕೆಲಸ ಬಿಟ್ಟು ಊರಲ್ಲೇ ಇದ್ದರು. ಬಿಜೆಪಿ ಮತ್ತು ಹಿಂದು ಸಂಘಟನೆಯಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡುತ್ತಿದ್ದರು. ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ಸ್ಥಾಪಕ ಸದಸ್ಯರಾಗಿದ್ದರು. ಅವಿವಾಹಿತರಾಗಿದ್ದು, ಸಂಘಟನೆಗಾಗಿಯೇ ತನ್ನ ಜೀವನ ಮುಡಿಪಾಗಿಟ್ಟಿದ್ದರು.
Bandiyod manjeshwar accident, 44 year old BJP Mandala secretary killed on spot. The deceased has been identified as Dhanraj.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am