ಬ್ರೇಕಿಂಗ್ ನ್ಯೂಸ್
16-12-24 05:53 pm HK News Desk ಕರ್ನಾಟಕ
ಶಿವಮೊಗ್ಗ, ಡಿ.16: ವಿಶ್ವವಿಖ್ಯಾತ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ದಟ್ಟಣೆ ಕಡಿಮೆ ಮಾಡಲು ಶಿವಮೊಗ್ಗ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ.
ಸಾಗರ ತಾಲೂಕಿನ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಜನವರಿ 1ರಿಂದ ಮಾರ್ಚ್ 15ರ ವರೆಗೆ ಪ್ರವೇಶ ನಿರ್ಬಂಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಎರಡೂವರೆ ತಿಂಗಳ ಬಳಿಕ ಪ್ರವಾಸಿಗರ ವೀಕ್ಷಣೆಗೆ ಅವಕಾಶ ದೊರೆಯಲಿದೆ.
ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಭಂದಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಸಮಗ್ರ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿ ಬಿರುಸಿನಿಂದ ಸಾಗಿದೆ. ಕಾಮಗಾರಿ ಕಾರಣ ಪ್ರವಾಸಿಗರು ದಿನನಿತ್ಯ ಕಿರಿಕಿರಿ ಅನುಭವಿಸತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿದೆ. ಹೀಗಾಗಿ ಪ್ರವಾಸಿಗರಿಗೆ ತೊಂದರೆಯಾಗದಂತೆ ಜ.1ರಿಂದ ಮಾ.15ರ ವರೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ.
The world-famous Jog Falls has been closed to tourists for two and a half months. The Shimoga district administration has taken this decision to reduce the influx of tourists in the wake of ongoing development work.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm