ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am