ಬ್ರೇಕಿಂಗ್ ನ್ಯೂಸ್
16-12-24 09:58 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.16: ಕಾನೂನು ಹೇಳಿಕೊಡಬೇಕಾದ ಸ್ಥಾನದಲ್ಲಿರುವ ಇನ್ಸ್ಪೆಕ್ಟರ್ ಒಬ್ಬ ತನ್ನ ಠಾಣೆಯ ಮಹಿಳಾ ಸಿಬ್ಬಂದಿಗೆ ರಾತ್ರಿಯೆಲ್ಲ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುರೇಶ್ ಯಳ್ಳೂರು ಎಂಬವರ ವಿರುದ್ಧ ಠಾಣೆಯ ಮಹಿಳಾ ಸಿಬಂದಿ, ಗೃಹ ಸಚಿವ ಮತ್ತು ಡಿಜಿಪಿಗೆ ಪತ್ರ ಬರೆದು ಅಳಲು ತೋಡಿಕೊಡಿದ್ದಾರೆ.
ಸುರೇಶ್ ರಾತ್ರಿಯಾದರೆ ಠಾಣೆಯ ಮಹಿಳಾ ಸಿಬ್ಬಂದಿಗಳಿಗೆ ವಿಡಿಯೋ ಕರೆ ಮಾಡಿ ಕಾಮ ಪ್ರಚೋದಕ ಮಾತುಗಳನ್ನು ಆಡುತ್ತಾರೆ. ಕೆಟ್ಟದಾಗಿ ಅಸಹ್ಯ ಪದಗಳನ್ನು ಬಳಸಿಕೊಂಡು ಮಾತನಾಡುತ್ತಾರೆ. ಠಾಣೆಯಲ್ಲಿ ರಜೆ ಕೇಳಲು ಹೋದಾಗ ನಮ್ಮ ಸೌಂದರ್ಯದ ಬಗ್ಗೆ ಮಾತನಾಡುತ್ತಾರೆ ಎಂದು ಆರೋಪಿಸಿ ಮಹಿಳಾ ಆಯೋಗಕ್ಕೂ ಸಿಬಂದಿ ಪತ್ರ ಬರೆದಿದ್ದಾರೆ.
ಇನ್ಸ್ ಪೆಕ್ಟರ್ ಸುರೇಶ್ ಯಳ್ಳೂರ ವಿರುದ್ಧ ಮೂರು ಪುಟಗಳಷ್ಟು ದೂರು ಬರೆದಿದ್ದು ರಾತ್ರಿಯಾದ್ರೆ ವಿಡಿಯೋ ಕಾಲ್ ಮಾಡಿ ನಮ್ಮ ಜೊತೆಗೆ ಕೆಟ್ಟದಾಗಿ ಮಾತನಾಡುತ್ತಾರೆ. ವಿಡಿಯೋ ಕಾಲ್ನಲ್ಲಿ ಸರಿಯಾಗಿ ಮಾತನಾಡದೆ ಹೋದ್ರೆ ವಿನಾಕಾರಣ ಕಿರುಕುಳ ಕೊಡುತ್ತಾರೆ. ಇನ್ಸ್ಪೆಕ್ಟರ್ನಿಂದಾಗಿ ನಮ್ಮ ಕುಟುಂಬದಲ್ಲಿ ಬಿರುಕು ಮೂಡುವಂತಾಗಿದೆ. ಇನ್ಸ್ಪೆಕ್ಟರ್ನಿಂದ ನಮಗೆ ಮುಕ್ತಿ ಕೊಡಿಸಿ ಎಂದು ಪತ್ರದ ಮೂಲಕ ಮಹಿಳಾ ಸಿಬಂದಿ ಕೇಳಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಡಿಜಿ&ಐಜಿಪಿಗೆ ಪತ್ರ ಬರೆದಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿ, ಹಳೇ ಹುಬ್ಬಳ್ಳಿ ಪಿಐ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಪರಿಶೀಲನೆ ಮಾಡಿ ತನಿಖೆ ಮಾಡಿಸುತ್ತೇನೆ. ನನಗೆ ಯಾವ ಪತ್ರವೂ ಬಂದಿಲ್ಲ. ಆದ್ರೆ ಈ ವಿಚಾರ ಗಮನಕ್ಕೆ ಬಂದಿದೆ. ಹಿರಿಯ ಅಧಿಕಾರಿಗಳನ್ನು ಕಳುಹಿಸಿ ಸತ್ಯಾಸತ್ಯತೆ ಪರಿಶೀಲನೆ ಮಾಡುತ್ತೇನೆ ಎಂದು ಹೇಳಿದರು.
Woman police complain of sexually harrasment by Hubballi Old police station inspector suresh yallaru. The staff has alleged that the inspector videos calls staffs at night and also misbehaves when staffs go to his cabin.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:02 pm
HK Desk
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm