ಬ್ರೇಕಿಂಗ್ ನ್ಯೂಸ್
19-12-24 06:36 pm HK News Desk ಕರ್ನಾಟಕ
ಚಿಕ್ಕಮಗಳೂರು, ಡಿ.19: ಕಾಫಿನಾಡಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. 20 ದಿನಗಳ ಅಂತರದಲ್ಲಿ ಕಾಡಾನೆ ದಾಳಿಗೆ ಎರಡು ಸಾವಾಗಿದ್ದು ರಾಜ್ಯ ಸರ್ಕಾರದ ವಿರುದ್ಧ ರೈತರ ಆಕ್ರೋಶ ತಿರುಗಿದೆ. ತೋಟಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು ಈ ವೇಳೆ ಮಗ ಓಡಿ ಹೋಗಿ ತಪ್ಪಿಸಿಕೊಂಡಿದ್ದರೆ, ತಂದೆ ಆನೆ ದಾಳಿಗೆ ಬಲಿಯಾಗಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮಡಬೂರು ಗ್ರಾಮದ ಬಳಿ ಘಟನೆ ನಡೆದಿದ್ದು ಎಲಿಯಾಸ್ (75) ಮೃತ ದುರ್ದೈವಿ. ಮಗ ವರ್ಗೀಸ್ ಆನೆ ದಾಳಿಯಿಂದ ಪಾರಾಗಿದ್ದಾನೆ. ಎಲಿಯಾಸ್ ಕುಟುಂಬ ಕೇರಳದಿಂದ ಬಂದು ಮಡಬೂರು ಗ್ರಾಮದಲ್ಲಿ ಅಡಿಕೆ-ಬಾಳೆ ತೋಟ ಮಾಡಿಕೊಂಡಿದ್ದರು. ಎಲಿಯಾಸ್ ಅವರನ್ನು ಒದ್ದು ಸಾಯಿಸಿದ ಬಳಿಕ ಕಾಡಾನೆ ಮೃತದೇಹದ ಸುತ್ತ ತಿರುಗುತ್ತ ಸ್ಥಳದಲ್ಲೇ ನಿಂತು ಹೂಂಕಾರ ಮಾಡುತ್ತಿತ್ತು. ಮೃತದೇಹಕ್ಕೆ ಒದೆಯುತ್ತಾ, ಘೀಳಿಡುತ್ತಾ ಸ್ಥಳದಲ್ಲೇ ನಿಂತಿರುವ ಸಲಗ ಪರಿಸರದಲ್ಲಿ ಭಯ ಸೃಷ್ಟಿಸಿದೆ.
ಇದೇ ನವೆಂಬರ್ 30ರಂದು ಪಕ್ಕದ ಸೀತೂರಲ್ಲಿ ಉಮೇಶ್ ಎಂಬವರನ್ನ ಕಾಡಾನೆ ತಿವಿದು ಸಾಯಿಸಿತ್ತು. ಇಂದು ಮಡಬೂರಲ್ಲಿ ಎಲಿಯಾಸ್ ಎಂಬ ಮತ್ತೊಬ್ಬನನ್ನು ಬಲಿ ಪಡೆದಿದೆ. ಹೀಗಾಗಿ ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Wild elephant attack in chikkamagaluru, farmer killed on spot, second death in 20 days.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm