ಬ್ರೇಕಿಂಗ್ ನ್ಯೂಸ್
14-12-20 09:44 pm Dilip : Bengaluru Correspondent ಕರ್ನಾಟಕ
ಬೆಂಗಳೂರು, ಡಿ.14: ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದು ಜೈಲು ಹಕ್ಕಿಯಾಗಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರ ಆಗಿದ್ದಾರೆ ಎಂಬ ಬಗ್ಗೆ ಸುದ್ದಿ ಹಬ್ಬಿತ್ತು. ಅದಕ್ಕೆ ಪೂರಕವಾಗಿ ಆಕೆ ಮುಸ್ಲಿಂ ಆಗಿ ಬಟ್ಟೆ ತೊಟ್ಟು ಅಜೀಜ್ ಎಂಬವರ ಜೊತೆ ಹಾರ ಬದಲಾಯಿಸಿಕೊಂಡ ಫೋಟೊಗಳು ಹರಿದಾಡಿದ್ದವು. ಇದಲ್ಲದೆ, ಆಕೆಯ ಮತಾಂತರ ಆಗಿರುವ ಬಗ್ಗೆ ದಾಖಲೆ ಪತ್ರಗಳೂ ಹರಿದಾಡಿದ್ದವು. ಇದೀಗ ಬೆಂಗಳೂರಿನ ವಕೀಲರೊಬ್ಬರು ಸಂಜನಾರನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪೊಲೀಸ್ ದೂರು ನೀಡಿದ್ದಾರೆ.
ಸಂಜನಾ ಮತಾಂತರ ಆಗಿರುವ ಬಗ್ಗೆ ದಾಖಲೆಯನ್ನು ಪ್ರಶಾಂತ್ ಸಂಬರ್ಗಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು. ಇದೀಗ, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.


ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.
ವೈದ್ಯ ಅಜೀಜ್ ಎಂಬುವರ ಜೊತೆಗೆ ಸಂಜನಾ ವಿವಾಹವಾಗಿದೆ ಎನ್ನಲಾಗುತ್ತಿದೆ, ಇದಕ್ಕೆ ಸಾಕ್ಷಿ ಎಂಬಂತೆ ಇಬ್ಬರೂ ಹಾರಗಳನ್ನು ತೊಟ್ಟಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಆದರೆ, ಮದುವೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಗೆ ಬಂದಿಲ್ಲ.
Actress Sanjana Galrani is facing another hardship after she was jailed for three months in a drug dealing case. A lawyer in Bangalore has filed a complaint alleging that actress Sanjana was forcibly converted to Islam.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm