ಬ್ರೇಕಿಂಗ್ ನ್ಯೂಸ್
23-12-24 07:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 23: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ 45 ವರ್ಷದ ಲಾರಿ ಮಾಲೀಕ ಸ್ವಾಮಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ವಾಮಿ ಪತ್ನಿ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಈ ವಿಚಾರ ಗೊತ್ತಿದ್ದ ಮೈಲಾರಾಪ್ಪ ಅವರ ಪತ್ನಿಯ ಸ್ವಾಮಿ ಮನೆಗೆ ಬಂದು ಆತನ ಪತ್ನಿಗೆ ಬುದ್ಧಿ ಹೇಳಿ ಹೋಗಿದ್ದರು ಆದ್ರು ಹೆಂಡತಿ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

2005-06ರಲ್ಲಿ ಸೋಮಶೇಖರ್ ಪವಿತ್ರಾಳನ್ನು ವಿವಾಹವಾಗಿದ್ದರು. ಪಿಯುಸಿ ಮಗಿಸಿದ್ದ ಪವಿತ್ರಾಳನ್ನು ಸ್ವಾಮಿ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದನು. ನಂತರ ಪವಿತ್ರಾ ಬೆಂಗಳೂರು ವಿ.ವಿ.ಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಈ ವೇಳೆ ಬೆಂಗಳೂರು ವಿವಿ ಉಪಕುಲಪತಿ (ರಿಜಿಸ್ಟ್ರಾರ್) ಆಗಿದ್ದ ಮೈಲಾರಪ್ಪ ಪವಿತ್ರಾಳಿಗೆ ಹಣದಾಸೆ ತೋರಿಸಿ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.
ಆಗ ಅಲ್ಲಿ ಮೈಲಾರಾಪ್ಪ ಎಂಬುವವರು ಇದ್ದರು. ಆಗ ಅವರು ಯುನಿವರ್ಸಿಟಿ ರಿಜಿಸ್ಟರ್ ಆಗಿದ್ದರು. ಈಗ ನಿವೃತ್ತಿ ಹೊಂದಿದ್ದಾರೆ. ಅವರೊಂದಿಗೆ ಸಂಪರ್ಕ ಆಗಿದೆ. ಆ ಮೇಲೆ ಅವರ ಸಂಸಾರ ಹಾಳಾಗಿತ್ತು. ಈ ವಿಚಾರ ಮೈಲಾರಾಪ್ಪ ಪತ್ನಿಗೂ ಗೊತ್ತಿದ್ದು, ಅವರು ಸ್ವಾಮಿ ಮನೆಗೆ ಬಂದು ಬುದ್ಧಿ ಹೇಳಿದ್ದರು. ಆದರೆ ಸ್ವಾಮಿ ಪತ್ನಿ ಬಿಟ್ಟಿರಲಿಲ್ಲ.
ಇದಕ್ಕೆಲ್ಲಾ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.
Tuck driver and owner from Bangalore committes suicide due to his wife's illicit affair with a former registrar of Bangalore University. The deceased has been identified as Swami. Wife had affair with Mailarappa who was the former sub registrar of Bangalore University
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm