ಬ್ರೇಕಿಂಗ್ ನ್ಯೂಸ್
23-12-24 07:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 23: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ 45 ವರ್ಷದ ಲಾರಿ ಮಾಲೀಕ ಸ್ವಾಮಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ವಾಮಿ ಪತ್ನಿ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಈ ವಿಚಾರ ಗೊತ್ತಿದ್ದ ಮೈಲಾರಾಪ್ಪ ಅವರ ಪತ್ನಿಯ ಸ್ವಾಮಿ ಮನೆಗೆ ಬಂದು ಆತನ ಪತ್ನಿಗೆ ಬುದ್ಧಿ ಹೇಳಿ ಹೋಗಿದ್ದರು ಆದ್ರು ಹೆಂಡತಿ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

2005-06ರಲ್ಲಿ ಸೋಮಶೇಖರ್ ಪವಿತ್ರಾಳನ್ನು ವಿವಾಹವಾಗಿದ್ದರು. ಪಿಯುಸಿ ಮಗಿಸಿದ್ದ ಪವಿತ್ರಾಳನ್ನು ಸ್ವಾಮಿ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದನು. ನಂತರ ಪವಿತ್ರಾ ಬೆಂಗಳೂರು ವಿ.ವಿ.ಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಈ ವೇಳೆ ಬೆಂಗಳೂರು ವಿವಿ ಉಪಕುಲಪತಿ (ರಿಜಿಸ್ಟ್ರಾರ್) ಆಗಿದ್ದ ಮೈಲಾರಪ್ಪ ಪವಿತ್ರಾಳಿಗೆ ಹಣದಾಸೆ ತೋರಿಸಿ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.
ಆಗ ಅಲ್ಲಿ ಮೈಲಾರಾಪ್ಪ ಎಂಬುವವರು ಇದ್ದರು. ಆಗ ಅವರು ಯುನಿವರ್ಸಿಟಿ ರಿಜಿಸ್ಟರ್ ಆಗಿದ್ದರು. ಈಗ ನಿವೃತ್ತಿ ಹೊಂದಿದ್ದಾರೆ. ಅವರೊಂದಿಗೆ ಸಂಪರ್ಕ ಆಗಿದೆ. ಆ ಮೇಲೆ ಅವರ ಸಂಸಾರ ಹಾಳಾಗಿತ್ತು. ಈ ವಿಚಾರ ಮೈಲಾರಾಪ್ಪ ಪತ್ನಿಗೂ ಗೊತ್ತಿದ್ದು, ಅವರು ಸ್ವಾಮಿ ಮನೆಗೆ ಬಂದು ಬುದ್ಧಿ ಹೇಳಿದ್ದರು. ಆದರೆ ಸ್ವಾಮಿ ಪತ್ನಿ ಬಿಟ್ಟಿರಲಿಲ್ಲ.
ಇದಕ್ಕೆಲ್ಲಾ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.
Tuck driver and owner from Bangalore committes suicide due to his wife's illicit affair with a former registrar of Bangalore University. The deceased has been identified as Swami. Wife had affair with Mailarappa who was the former sub registrar of Bangalore University
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am