ಬ್ರೇಕಿಂಗ್ ನ್ಯೂಸ್
23-12-24 07:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 23: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ ನಲ್ಲಿ ನೆಲೆಸಿದ್ದ 45 ವರ್ಷದ ಲಾರಿ ಮಾಲೀಕ ಸ್ವಾಮಿ ಎಂಬುವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ವಾಮಿ ಪತ್ನಿ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ವಿಶ್ವವಿದ್ಯಾಲಯದ ರಿಜಿಸ್ಟರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಈ ವಿಚಾರ ಗೊತ್ತಿದ್ದ ಮೈಲಾರಾಪ್ಪ ಅವರ ಪತ್ನಿಯ ಸ್ವಾಮಿ ಮನೆಗೆ ಬಂದು ಆತನ ಪತ್ನಿಗೆ ಬುದ್ಧಿ ಹೇಳಿ ಹೋಗಿದ್ದರು ಆದ್ರು ಹೆಂಡತಿ ತನ್ನ ಚಾಳಿಯನ್ನು ಬಿಟ್ಟಿರಲಿಲ್ಲ. ಇದರಿಂದ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
2005-06ರಲ್ಲಿ ಸೋಮಶೇಖರ್ ಪವಿತ್ರಾಳನ್ನು ವಿವಾಹವಾಗಿದ್ದರು. ಪಿಯುಸಿ ಮಗಿಸಿದ್ದ ಪವಿತ್ರಾಳನ್ನು ಸ್ವಾಮಿ ಕಾಲೇಜಿಗೆ ಸೇರಿಸಿ ಬಿ.ಕಾಂ ಓದಿಸಿದ್ದನು. ನಂತರ ಪವಿತ್ರಾ ಬೆಂಗಳೂರು ವಿ.ವಿ.ಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಈ ವೇಳೆ ಬೆಂಗಳೂರು ವಿವಿ ಉಪಕುಲಪತಿ (ರಿಜಿಸ್ಟ್ರಾರ್) ಆಗಿದ್ದ ಮೈಲಾರಪ್ಪ ಪವಿತ್ರಾಳಿಗೆ ಹಣದಾಸೆ ತೋರಿಸಿ ಬುಟ್ಟಿಗೆ ಬೀಳಿಸಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಮೃತನ ಸಂಬಂಧಿ ನಾಗರಾಜ್ ಎಂಬುವವರು ಮಾಧ್ಯಮದವರೊಂದಿಗೆ ಮಾತನಾಡಿದ್ದು, ಮೃತ ಸ್ವಾಮಿ ಒಳ್ಳೆಯ ಮನುಷ್ಯ. ಮದುವೆ, ಮನೆ, ಮಕ್ಕಳು ಅಂತ ಇದ್ದವರು. ಆತನ ಪತ್ನಿ ಕಳೆದ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿದ್ದರು.
ಆಗ ಅಲ್ಲಿ ಮೈಲಾರಾಪ್ಪ ಎಂಬುವವರು ಇದ್ದರು. ಆಗ ಅವರು ಯುನಿವರ್ಸಿಟಿ ರಿಜಿಸ್ಟರ್ ಆಗಿದ್ದರು. ಈಗ ನಿವೃತ್ತಿ ಹೊಂದಿದ್ದಾರೆ. ಅವರೊಂದಿಗೆ ಸಂಪರ್ಕ ಆಗಿದೆ. ಆ ಮೇಲೆ ಅವರ ಸಂಸಾರ ಹಾಳಾಗಿತ್ತು. ಈ ವಿಚಾರ ಮೈಲಾರಾಪ್ಪ ಪತ್ನಿಗೂ ಗೊತ್ತಿದ್ದು, ಅವರು ಸ್ವಾಮಿ ಮನೆಗೆ ಬಂದು ಬುದ್ಧಿ ಹೇಳಿದ್ದರು. ಆದರೆ ಸ್ವಾಮಿ ಪತ್ನಿ ಬಿಟ್ಟಿರಲಿಲ್ಲ.
ಇದಕ್ಕೆಲ್ಲಾ ಮನನೊಂದು ಸ್ವಾಮಿ ನಿನ್ನೆ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ ಮೂರು ಪುಟಗಳ ಡೆತ್ ನೋಟ್ ಬರೆದು ಇಟ್ಟಿದ್ದಾರಂತೆ. ಅದು ನಮಗೆ ಸಿಕ್ಕಿಲ್ಲ. ಪೊಲೀಸರು ಮಹಜರು ಮಾಡಿದಾಗ ನೋಡಬೇಕು ಎಂದು ಹೇಳಿದ್ದಾರೆ.
Tuck driver and owner from Bangalore committes suicide due to his wife's illicit affair with a former registrar of Bangalore University. The deceased has been identified as Swami. Wife had affair with Mailarappa who was the former sub registrar of Bangalore University
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am