ಬ್ರೇಕಿಂಗ್ ನ್ಯೂಸ್
24-12-24 03:44 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬಿಜೆಪಿ ಎಂಎಲ್ಸಿ ಸಿ.ಟಿ ರವಿ ನಿಂದಿಸಿದ್ದಾರೆನ್ನುವ ಪ್ರಕರಣದಲ್ಲಿ ಸದನದ ಒಳಗಡೆ ಮಹಜರು ನಡೆಸಲು ಸಭಾಪತಿ ಬಸವರಾಜ ಹೊರಟ್ಟಿ ಪೊಲೀಸರಿಗೆ ಅನುಮತಿ ನಿರಾಕರಿಸಿದ್ದು ಬೆಳಗಾವಿ ನಗರ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದಾರೆ.
ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಅವರು ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೋರಿ ಸಭಾಪತಿಗೆ ಪತ್ರ ಬರೆದಿದ್ದಾರೆ. ಆದರೆ ಈ ಬಗ್ಗೆ ಹೇಳಿಕೆ ನೀಡಿರುವ ಹೊರಟ್ಟಿ, ಪೊಲೀಸರು ಸದನದ ಒಳಗಡೆ ಬಂದು ಪರಿಶೀಲಿಸುವ ಹಕ್ಕು ಹೊಂದಿಲ್ಲ ಎಂದಿದ್ದಾರೆ.
ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಪರಿಷತ್ತಿನ ಒಳಗೆ ನಡೆದ ಘಟನೆಯಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಬಾರದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಹೇಳಿದ್ದಾರೆ.
ಘಟನಾ ಸ್ಥಳದಲ್ಲಿ ಮಹಜರು ನಡೆಯದ ಹೊರತು ತನಿಖೆ ಅಪೂರ್ಣವಾಗಲಿದ್ದು ಒಟ್ಟು ಪ್ರಕರಣಕ್ಕೆ ಹಿನ್ನಡೆಯಾಗಿದೆ. ಇದರಿಂದಾಗಿ ಮುಂದಿನ ಬೆಳವಣಿಗೆ ಬಗ್ಗೆ ಕುತೂಹಲ ಕೆರಳಿಸಿದೆ. ಸದನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ ಬಳಿಕ ಸದನಕ್ಕೆ ಬೀಗ ಹಾಕಲಾಗಿದೆ. ಸದನ ಪ್ರವೇಶ ಮಾಡಲು ಪೊಲೀಸರು ಅಧಿಕಾರ ಹೊಂದಿಲ್ಲ.
ಸದನದಲ್ಲಿ ನಡೆದಿರುವ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚಿಸಿದ ಬಳಿಕ ರೂಲಿಂಗ್ ನೀಡಿದ್ದೇನೆ. ಅಲ್ಲಿಗೆ ಅದು ಮುಗಿದ ಅಧ್ಯಾಯ. ಮುಂದೆ ಎರಡೂ ಕಡೆಯಿಂದ ದೂರು ಬಂದರೆ ಮಾತ್ರ ಪರಿಶೀಲಿಸಲಾಗುವುದು. ಸದ್ಯಕ್ಕೆ ಏನೂ ಬೆಳವಣಿಗೆ ಆಗಿಲ್ಲ ಎಂದು ಹೊರಟ್ಟಿ ತಿಳಿಸಿದ್ದಾರೆ. ಬೆಳಗಾವಿ ಕಮಿಷನರ್ ಯಡಾ ಮಾರ್ಟಿನ್ ಪ್ರತಿಕ್ರಿಯಿಸಿ, ನಾವು ಸ್ಥಳ ಮಹಜರಿಗೆ ಅನುಮತಿ ಕೇಳಿದ್ದೆವು. ಈವರೆಗೆ ಅನುಮತಿ ಸಿಕ್ಕಿಲ್ಲ. ನಾವು ಸದನ ಪ್ರವೇಶ ಮಾಡಿಲ್ಲ. ಸಿಟಿ ರವಿ ಅವರು ಸದನದಿಂದ ಹೊರಬಂದ ಬಳಿಕ ಬಂಧಿಸಲಾಗಿತ್ತು ಎಂದು ತಿಳಿಸಿದ್ದಾರೆ.
CT Ravi remarks on Lakshmi Hebbalkar, speaker Khader rejects spot mahazar inside the parliament. Ravi was taken into custody after the registration of a case under sections 75 (sexual harassment) and 79 (act intended to insult the modesty of a woman) of the Bharatiya Nyaya Sanhita at Hirebagewadi police station.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm