ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm