ಬ್ರೇಕಿಂಗ್ ನ್ಯೂಸ್
24-12-24 08:32 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ಸಿಟಿ ರವಿ ಅವರು ಅಶ್ಲೀಲ ಪದ ಬಳಸಿಲ್ಲ ಎಂಬುದನ್ನು ಹೇಳಿಕೊಂಡು ಹೋಗುತ್ತಿದ್ದಾರೆ. ಬಿಜೆಪಿಯವರು ಹೂಹಾರ ಹಾಕಿ ಅವರನ್ನು ಸ್ವಾಗತಿಸುತ್ತಿದ್ದಾರೆ. ಅವರು ಹೇಳೋದು ನಿಜವೇ ಆದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಸವಾಲು ಹಾಕಿದ್ದು, ಸಿಟಿ ರವಿ ನಿತ್ಯವೂ ಮಾಧ್ಯಮಗಳ ಮುಂದೆ ನಾನು ಯಾವುದೇ ಅಶ್ಲೀಲ ಪದ ಬಳಸಿಲ್ಲ ಎಂದು ವಾದಿಸುತ್ತಿದ್ದಾರೆ. ಹಾಗಿದ್ದರೆ ಧರ್ಮಸ್ಥಳದಲ್ಲಿ ನನ್ನ ಉಪಸ್ಥಿತಿಯಲ್ಲಿ ಈ ಕುರಿತು ಪ್ರಮಾಣ ಮಾಡಲಿ. ಧರ್ಮಸ್ಥಳ ಅವರಿಗೆ ಹತ್ತಿರವೇ ಇದೆ, ಅಲ್ಲಿಗೆ ಬರಲಿ. ನಾನೂ ಬರುತ್ತೇನೆ ಎಂದು ಸವಾಲು ಹಾಕಿದರು.
ಸಿಟಿ ರವಿ ನನ್ನ ವಿರುದ್ಧ ಬಳಸಿರುವ ಪದ ಸಭ್ಯ ನಾಗರಿಕರು ಬಳಸುವಂತದ್ದಲ್ಲ. ಅದನ್ನು ನಾನು ತಪ್ಪಿಯೂ ನನ್ನ ಬಾಯಿಂದ ಆಡಲಾರೆ. ಆದರೆ ಅವರ ಪದ ಬಳಕೆಯಿಂದ ನನಗೆ ಆಗಿರುವ ನೋವು ಮಾತ್ರ ಅಗಾಧ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭಾವುಕರಾಗಿ ನುಡಿದರು.
ಹೆಣ್ಣು ಮಕ್ಕಳ ಬಗ್ಗೆ ಸಿಟಿ ರವಿ ಅವರಿಗೆ ಅದೆಷ್ಟು ಗೌರವವಿದೆ ಎಂಬುದು ಈಗ ಗೊತ್ತಾಗಿದೆ. ಗೃಹ ಸಚಿವರು ಈಗ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪು ಮಾಡಿಲ್ಲ ಎಂದ ಮೇಲೆ ಸಿಟಿ ರವಿ ಯಾವ ತನಿಖೆಗೂ ಹೆದರಬಾರದು ಅಲ್ಲವೇ ಎಂದ ಲಕ್ಷ್ಮೀ ಹೆಬ್ಬಾಳ್ಕರ್ ಮಾರ್ಮಿಕವಾಗಿ ಪ್ರಶ್ನಿಸಿದರು.
ಈ ಬಗ್ಗೆ ತಿರುಗೇಟು ನೀಡಿರುವ ಸಿಟಿ ರವಿ, ಧರ್ಮಸ್ಥಳ ನಮಗೆ ಪಕ್ಕದಲ್ಲೇ ಇರುವ ಊರು. ನಾನು ಆಗಾಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಲೇ ಇರುತ್ತೇನೆ ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
Lakshmi Hebbalkar challenged CT Ravi to swear before Lord Manjunatha at Dharmasthala if he had not made those remarks. She said she will also be present in Dharmasthala with her family on that day and asked Ravi to come with his family too.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm