ಬ್ರೇಕಿಂಗ್ ನ್ಯೂಸ್
25-12-24 12:46 pm HK News Desk ಕರ್ನಾಟಕ
ಬಾಗಲಕೋಟೆ/ಬೆಳಗಾವಿ, ಡಿ 25: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ ಗಾಯಗೊಂಡ ದುರ್ಘಟನೆ ಸಂಭವಿಸಿತ್ತು.
ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ ಮಹೇಶ್ ಮಾರಿಗೊಂಡ (25), ಬೆಳಗಾವಿ ತಾಲೂಕಿನ ಪಂತನಗರದ ಯೋಧ ದಯಾನಂದ ತಿರಕಣ್ಣವರ (44) ಹಾಗೂ ಕುಂದಾಪುರದ ಅನೂಪ್ ಎಂಬವರೂ ಕೂಡ ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹೇಶ್ ಮರಿಗೊಂಡ ಅವರು 11ನೇ ಮರಾಠಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸೈನಿಕರನ್ನು ಹೊತ್ತ ವಾಹನವು ಮೆಂಡರ್ ಎಂಬ ಪ್ರದೇಶಕ್ಕೆ ಕರ್ತವ್ಯಕ್ಕೆ ಹೊರಟಿತ್ತು ಎಂದು ತಿಳಿದುಬಂದಿದೆ.
ಸಿಎಂ ಸಂತಾಪ:
ಈ ಬಗ್ಗೆ ಮುಖ್ಯಮಂತ್ರಿಗಳು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ''ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ'' ಎಂದಿದ್ದಾರೆ.
Five soldiers died after an army vehicle fell into a gorge in Jammu and Kashmir's Poonch on Tuesday. Of them, three -- Dayanand Thirakannavara, Anoop and Mahesh Marigonda -- were from Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm