ಬ್ರೇಕಿಂಗ್ ನ್ಯೂಸ್
25-12-24 10:10 pm HK News Desk ಕರ್ನಾಟಕ
ಬೆಳಗಾವಿ, ಡಿ.25: ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಖಾನಾಪುರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿ ನಾಯಕರಿಗೆ ಠಾಣೆಯ ಒಳಗೆ ಬರಲು ಅವಕಾಶ ನೀಡಿದ್ದಕ್ಕಾಗಿ ಮಂಜುನಾಥ್ ನಾಯಕರನ್ನು ಅಮಾನತು ಮಾಡಿ ಬೆಳಗಾವಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿಯನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಬೆಳಗಾವಿ ಮತ್ತು ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಜಿಪಿ ವಿಕಾಸ್ ಕುಮಾರ್, ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಬಂಧಿಸಲಾಗಿತ್ತು, ಅವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಶಿಫ್ಟ್ ಮಾಡಲಾಗಿತ್ತು. ಆ ವೇಳೆ, ಸೂಕ್ತ ಭದ್ರತೆಯನ್ನು ಒದಗಿಸಿ, ಯಾರನ್ನೂ ಯಾವುದೇ ಕಾರಣಕ್ಕೂ ಒಳಗೆ ಬಿಡದಂತೆ ಆದೇಶ ನೀಡಲಾಗಿತ್ತು. ಅದನ್ನು ಪಾಲಿಸಲಾಗಿಲ್ಲ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಆದೇಶದ ಹೊರತಾಗಿಯೂ, ಠಾಣೆಯಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿರಲಿಲ್ಲ. ಠಾಣೆಯ ಒಳಗೆ ರಾಜಕೀಯ ನಾಯಕರು ಬಲವಂತವಾಗಿ ಒಳಗೆ ಬಂದಿದ್ದರು. ಅಷ್ಟೇ ಅಲ್ಲದೇ, ಸಭೆಯನ್ನೂ ನಡೆಸಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಅಮಾನತು ಆದೇಶವನ್ನು ಖಂಡಿಸಿ, ಬಿಜೆಪಿ ಬೆಳಗಾವಿ ಘಟಕದಿಂದ ಗುರುವಾರ ಡಿ.26ರಂದು ಖಾನಾಪುರ ಬಂದ್ ಗೆ ಕರೆ ನೀಡಿದೆ. ಬಿಜೆಪಿ ನೀಡಿರುವ ಬಂದ್ ಕರೆಗೆ, ಜೆಡಿಎಸ್ ಮತ್ತು ಹಲವು ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದೇ ವಿಚಾರದಲ್ಲಿ ಬೆಳಗಾವಿಯಲ್ಲಿರುವ ಗೃಹ ಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ಅದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದು ಅವರಿಗೆ ಗೊತ್ತಿರುವುದು. ಅದಕ್ಕೆ ಸರ್ಕಾರ ಇನ್ವಾಲ್ ಆಗುವುದಿಲ್ಲ. ಯಾವ ಸೂಚನೆಯನ್ನೂ ಕೊಡುವುದಿಲ್ಲ. ಇಲಾಖೆ ಹಂತದಲ್ಲಿ ಯಾವ ಲ್ಯಾಪ್ಸ್ ಇತ್ತು ಅವರಿಗೆ ಗೊತ್ತು. ಸ್ಪೆಸಿಫಿಕ್ ಆಗಿ ಅವರನ್ನೇ ಮಾಡಬೇಕು ಅಂದ್ರೆ ಯಾವ ಕಾರಣಕ್ಕೆ ಆಗಿದೆ ಗೊತ್ತಿಲ್ಲ ಎಂದಿದ್ದಾರೆ.
ಸಿಟಿ ರವಿ ಹಲ್ಲೆ ಆರೋಪಿ ಬಂಧನ ಆಗದ ಬಗ್ಗೆ ಕೇಳಿದ್ದಕ್ಕೆ, ಸಿಒಡಿ ತನಿಖೆಗೆ ಕೊಟ್ಟಿದ್ದೇವೆ. ಈಗ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ಮಾಧ್ಯಮದವರನ್ನ ಕೇಳಿ ಮಾಡಬೇಕಾ ಎಂದು ಮಾಧ್ಯಮದವರ ಮೇಲೆ ಪರಂ ಗರಂ ಆದರು.
Police Inspector of Khanapur station has been suspended for dereliction of duty by allegedly letting in political leaders and others inside the station while BJP MLC C T Ravi was in custody in connection with a case registered against him, officials said on Wednesday.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 01:05 pm
HK News Staffer
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm