ಬ್ರೇಕಿಂಗ್ ನ್ಯೂಸ್
25-12-24 10:10 pm HK News Desk ಕರ್ನಾಟಕ
ಬೆಳಗಾವಿ, ಡಿ.25: ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಖಾನಾಪುರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿ ನಾಯಕರಿಗೆ ಠಾಣೆಯ ಒಳಗೆ ಬರಲು ಅವಕಾಶ ನೀಡಿದ್ದಕ್ಕಾಗಿ ಮಂಜುನಾಥ್ ನಾಯಕರನ್ನು ಅಮಾನತು ಮಾಡಿ ಬೆಳಗಾವಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿಯನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಬೆಳಗಾವಿ ಮತ್ತು ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಜಿಪಿ ವಿಕಾಸ್ ಕುಮಾರ್, ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಬಂಧಿಸಲಾಗಿತ್ತು, ಅವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಶಿಫ್ಟ್ ಮಾಡಲಾಗಿತ್ತು. ಆ ವೇಳೆ, ಸೂಕ್ತ ಭದ್ರತೆಯನ್ನು ಒದಗಿಸಿ, ಯಾರನ್ನೂ ಯಾವುದೇ ಕಾರಣಕ್ಕೂ ಒಳಗೆ ಬಿಡದಂತೆ ಆದೇಶ ನೀಡಲಾಗಿತ್ತು. ಅದನ್ನು ಪಾಲಿಸಲಾಗಿಲ್ಲ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಆದೇಶದ ಹೊರತಾಗಿಯೂ, ಠಾಣೆಯಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿರಲಿಲ್ಲ. ಠಾಣೆಯ ಒಳಗೆ ರಾಜಕೀಯ ನಾಯಕರು ಬಲವಂತವಾಗಿ ಒಳಗೆ ಬಂದಿದ್ದರು. ಅಷ್ಟೇ ಅಲ್ಲದೇ, ಸಭೆಯನ್ನೂ ನಡೆಸಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಅಮಾನತು ಆದೇಶವನ್ನು ಖಂಡಿಸಿ, ಬಿಜೆಪಿ ಬೆಳಗಾವಿ ಘಟಕದಿಂದ ಗುರುವಾರ ಡಿ.26ರಂದು ಖಾನಾಪುರ ಬಂದ್ ಗೆ ಕರೆ ನೀಡಿದೆ. ಬಿಜೆಪಿ ನೀಡಿರುವ ಬಂದ್ ಕರೆಗೆ, ಜೆಡಿಎಸ್ ಮತ್ತು ಹಲವು ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದೇ ವಿಚಾರದಲ್ಲಿ ಬೆಳಗಾವಿಯಲ್ಲಿರುವ ಗೃಹ ಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ಅದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದು ಅವರಿಗೆ ಗೊತ್ತಿರುವುದು. ಅದಕ್ಕೆ ಸರ್ಕಾರ ಇನ್ವಾಲ್ ಆಗುವುದಿಲ್ಲ. ಯಾವ ಸೂಚನೆಯನ್ನೂ ಕೊಡುವುದಿಲ್ಲ. ಇಲಾಖೆ ಹಂತದಲ್ಲಿ ಯಾವ ಲ್ಯಾಪ್ಸ್ ಇತ್ತು ಅವರಿಗೆ ಗೊತ್ತು. ಸ್ಪೆಸಿಫಿಕ್ ಆಗಿ ಅವರನ್ನೇ ಮಾಡಬೇಕು ಅಂದ್ರೆ ಯಾವ ಕಾರಣಕ್ಕೆ ಆಗಿದೆ ಗೊತ್ತಿಲ್ಲ ಎಂದಿದ್ದಾರೆ.
ಸಿಟಿ ರವಿ ಹಲ್ಲೆ ಆರೋಪಿ ಬಂಧನ ಆಗದ ಬಗ್ಗೆ ಕೇಳಿದ್ದಕ್ಕೆ, ಸಿಒಡಿ ತನಿಖೆಗೆ ಕೊಟ್ಟಿದ್ದೇವೆ. ಈಗ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ಮಾಧ್ಯಮದವರನ್ನ ಕೇಳಿ ಮಾಡಬೇಕಾ ಎಂದು ಮಾಧ್ಯಮದವರ ಮೇಲೆ ಪರಂ ಗರಂ ಆದರು.
Police Inspector of Khanapur station has been suspended for dereliction of duty by allegedly letting in political leaders and others inside the station while BJP MLC C T Ravi was in custody in connection with a case registered against him, officials said on Wednesday.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm