ಬ್ರೇಕಿಂಗ್ ನ್ಯೂಸ್
25-12-24 10:10 pm HK News Desk ಕರ್ನಾಟಕ
ಬೆಳಗಾವಿ, ಡಿ.25: ಬಿಜೆಪಿ ಶಾಸಕ ಸಿ.ಟಿ.ರವಿ ಬಂಧನ ಸಂದರ್ಭದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆಂದು ಖಾನಾಪುರ ಪೊಲೀಸ್ ಇನ್ ಸ್ಪೆಕ್ಟರ್ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ಬಿಜೆಪಿ ನಾಯಕರಿಗೆ ಠಾಣೆಯ ಒಳಗೆ ಬರಲು ಅವಕಾಶ ನೀಡಿದ್ದಕ್ಕಾಗಿ ಮಂಜುನಾಥ್ ನಾಯಕರನ್ನು ಅಮಾನತು ಮಾಡಿ ಬೆಳಗಾವಿ ಐಜಿಪಿ ಆದೇಶ ಹೊರಡಿಸಿದ್ದಾರೆ.
ಸಿಟಿ ರವಿಯನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರುಪಡಿಸದೆ ಬೆಳಗಾವಿ ಮತ್ತು ಬಾಗಲಕೋಟೆಯ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಐಜಿಪಿ ವಿಕಾಸ್ ಕುಮಾರ್, ಡಿಸೆಂಬರ್ 19ರಂದು ಸಿ.ಟಿ.ರವಿಯವರನ್ನು ಬಂಧಿಸಲಾಗಿತ್ತು, ಅವರನ್ನು ಹಿರೇಬಾಗೇವಾಡಿ ಠಾಣೆಯಿಂದ ಖಾನಾಪುರ ಠಾಣೆಗೆ ಶಿಫ್ಟ್ ಮಾಡಲಾಗಿತ್ತು. ಆ ವೇಳೆ, ಸೂಕ್ತ ಭದ್ರತೆಯನ್ನು ಒದಗಿಸಿ, ಯಾರನ್ನೂ ಯಾವುದೇ ಕಾರಣಕ್ಕೂ ಒಳಗೆ ಬಿಡದಂತೆ ಆದೇಶ ನೀಡಲಾಗಿತ್ತು. ಅದನ್ನು ಪಾಲಿಸಲಾಗಿಲ್ಲ ಎಂದು ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಆದೇಶದ ಹೊರತಾಗಿಯೂ, ಠಾಣೆಯಲ್ಲಿ ಸೂಕ್ತ ಬಂದೋಬಸ್ತ್ ಅನ್ನು ಮಾಡಿರಲಿಲ್ಲ. ಠಾಣೆಯ ಒಳಗೆ ರಾಜಕೀಯ ನಾಯಕರು ಬಲವಂತವಾಗಿ ಒಳಗೆ ಬಂದಿದ್ದರು. ಅಷ್ಟೇ ಅಲ್ಲದೇ, ಸಭೆಯನ್ನೂ ನಡೆಸಿದ್ದರು. ಮೇಲಧಿಕಾರಿಗಳ ಆದೇಶ ಉಲ್ಲಂಘನೆ ಹಿನ್ನಲೆಯಲ್ಲಿ ಅಮಾನತಿನ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಐಜಿಪಿ ಸ್ಪಷ್ಟಪಡಿಸಿದ್ದಾರೆ.
ಅಮಾನತು ಆದೇಶವನ್ನು ಖಂಡಿಸಿ, ಬಿಜೆಪಿ ಬೆಳಗಾವಿ ಘಟಕದಿಂದ ಗುರುವಾರ ಡಿ.26ರಂದು ಖಾನಾಪುರ ಬಂದ್ ಗೆ ಕರೆ ನೀಡಿದೆ. ಬಿಜೆಪಿ ನೀಡಿರುವ ಬಂದ್ ಕರೆಗೆ, ಜೆಡಿಎಸ್ ಮತ್ತು ಹಲವು ದಲಿತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಇದೇ ವಿಚಾರದಲ್ಲಿ ಬೆಳಗಾವಿಯಲ್ಲಿರುವ ಗೃಹ ಸಚಿವ ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ಅದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮಾಡಿದ್ದಾರೆ. ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದು ಅವರಿಗೆ ಗೊತ್ತಿರುವುದು. ಅದಕ್ಕೆ ಸರ್ಕಾರ ಇನ್ವಾಲ್ ಆಗುವುದಿಲ್ಲ. ಯಾವ ಸೂಚನೆಯನ್ನೂ ಕೊಡುವುದಿಲ್ಲ. ಇಲಾಖೆ ಹಂತದಲ್ಲಿ ಯಾವ ಲ್ಯಾಪ್ಸ್ ಇತ್ತು ಅವರಿಗೆ ಗೊತ್ತು. ಸ್ಪೆಸಿಫಿಕ್ ಆಗಿ ಅವರನ್ನೇ ಮಾಡಬೇಕು ಅಂದ್ರೆ ಯಾವ ಕಾರಣಕ್ಕೆ ಆಗಿದೆ ಗೊತ್ತಿಲ್ಲ ಎಂದಿದ್ದಾರೆ.
ಸಿಟಿ ರವಿ ಹಲ್ಲೆ ಆರೋಪಿ ಬಂಧನ ಆಗದ ಬಗ್ಗೆ ಕೇಳಿದ್ದಕ್ಕೆ, ಸಿಒಡಿ ತನಿಖೆಗೆ ಕೊಟ್ಟಿದ್ದೇವೆ. ಈಗ ಯಾವ ಹೇಳಿಕೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ಮಾಧ್ಯಮದವರನ್ನ ಕೇಳಿ ಮಾಡಬೇಕಾ ಎಂದು ಮಾಧ್ಯಮದವರ ಮೇಲೆ ಪರಂ ಗರಂ ಆದರು.
Police Inspector of Khanapur station has been suspended for dereliction of duty by allegedly letting in political leaders and others inside the station while BJP MLC C T Ravi was in custody in connection with a case registered against him, officials said on Wednesday.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm