ಬ್ರೇಕಿಂಗ್ ನ್ಯೂಸ್
26-12-24 04:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಅಪರಾಧ ಪ್ರಕರಣದಲ್ಲಿ ಆರೋಪಿಗೆ ಜಾಮೀನು ಕೊಡಿಸುವ ನೆಪದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ಮಹಿಳಾ ವಕೀಲರೊಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ನೀಡಿದ ದೂರಿನಂತೆ ವಕೀಲೆ ದಯೀನಾ ಬಾನು ಎಂಬವರ ವಿರುದ್ಧ ಬಿಎನ್ಎಸ್ 318 (4) ಅಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಒಂದರಲ್ಲಿ ಜಾಮೀನು ಕೊಡಿಸಲು ಹೈಕೋರ್ಟ್ ನ್ಯಾಯಮೂರ್ತಿ 50 ಲಕ್ಷ ರೂ. ಹಣ ಕೇಳುತ್ತಿದ್ದಾರೆ. ಹಣ ನೀಡದಿದ್ದರೆ ಜಾಮೀನು ಅರ್ಜಿಯನ್ನ ಬೇರೆ ವಕೀಲರಿಂದ ಮಾಡಿಸಿಕೊಳ್ಳಿ ಎಂದು ದಯೀನಾ ಬಾನು ಹೇಳಿರುವುದಾಗಿ ಎಫ್ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್ ಜಾಮೀನು ಸಿಗದೆ ಮೂರು ವರ್ಷಗಳಿಂದ ಜೈಲಿನಲ್ಲಿದ್ದ. ಮಗನನ್ನು ಜಾಮೀನಿನಲ್ಲಿ ಬಿಡಿಸಲು ಆತನ ತಾಯಿ ಥೆರೆಸಾ, ಮಹಿಳಾ ನ್ಯಾಯವಾದಿ ಮರೀನಾ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಮರೀನಾ 10 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದರೂ ಆರೋಪಿಗೆ ಜಾಮೀನು ಕೊಡಿಸಲು ವಿಫಲವಾಗಿದ್ದರಿಂದ ತಾಯಿ ಥೆರೆಸಾ, ತನ್ನ ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ವಕೀಲೆ 9 ಲಕ್ಷ ರೂ. ಮೊತ್ತದ 3 ಚೆಕ್ ನೀಡಿದ್ದು ಬಿಟ್ಟರೆ ಹಣ ಹಿಂದಿರುಗಿಸಲಿರಲಿಲ್ಲ.
ಹಣ ವಾಪಸ್ ನೀಡಲು ಒತ್ತಡ ಹೇರಿದಾಗ ಥೆರೆಸಾಗೆ ವಕೀಲೆ ಮರೀನಾ ಅವರು ಆರತಿ ಎಂಬವರನ್ನ ಪರಿಚಯಿಸಿದ್ದರು. ಅವರು ತನಗೆ ಹೈಕೋರ್ಟ್ ನ್ಯಾಯಮೂರ್ತಿಯ ಪರಿಚಯ ಇರುವುದಾಗಿ ಹೇಳಿ 72 ಸಾವಿರ ರೂ. ಪಡೆದಿದ್ದರು. ಆದರೆ ಯಾವುದೇ ಫಲ ನೀಡಿರಲಿಲ್ಲ. ಇದೇ ವೇಳೆ, ಮತ್ತೊಬ್ಬ ವಕೀಲೆ ದಯೀನಾ ಬಾನು ಪರಿಚಯವಾಗಿದ್ದು ಅವರು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಕೊಡಿಸಲು 50 ಲಕ್ಷ ರೂ. ಹಣವನ್ನು ಕೇಳುತ್ತಿದ್ದಾರೆ. ಹಣ ನೀಡಲು ಸಾಧ್ಯವಾಗದಿದ್ದರೆ ಜಾಮೀನು ಪಡೆಯಲು ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಇದರಿಂದ ಬೇಸತ್ತ ಥೆರೆಸಾ ಅವರು ವಕೀಲೆ ದಯೀನಾ ಬಾನು ಹೈಕೋರ್ಟ್ ನ್ಯಾಯಮೂರ್ತಿ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾಗಿ ಹೈಕೋರ್ಟ್ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been filed against advocate Dhahina Bhanu in Bangalore for allegedly misusing the name of a High Court judge and demanding 50 lakhs. The complaint has been registered at the Vidhana Soudha police station.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am