ಬ್ರೇಕಿಂಗ್ ನ್ಯೂಸ್
26-12-24 04:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಅಪರಾಧ ಪ್ರಕರಣದಲ್ಲಿ ಆರೋಪಿಗೆ ಜಾಮೀನು ಕೊಡಿಸುವ ನೆಪದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ಮಹಿಳಾ ವಕೀಲರೊಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ನೀಡಿದ ದೂರಿನಂತೆ ವಕೀಲೆ ದಯೀನಾ ಬಾನು ಎಂಬವರ ವಿರುದ್ಧ ಬಿಎನ್ಎಸ್ 318 (4) ಅಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಒಂದರಲ್ಲಿ ಜಾಮೀನು ಕೊಡಿಸಲು ಹೈಕೋರ್ಟ್ ನ್ಯಾಯಮೂರ್ತಿ 50 ಲಕ್ಷ ರೂ. ಹಣ ಕೇಳುತ್ತಿದ್ದಾರೆ. ಹಣ ನೀಡದಿದ್ದರೆ ಜಾಮೀನು ಅರ್ಜಿಯನ್ನ ಬೇರೆ ವಕೀಲರಿಂದ ಮಾಡಿಸಿಕೊಳ್ಳಿ ಎಂದು ದಯೀನಾ ಬಾನು ಹೇಳಿರುವುದಾಗಿ ಎಫ್ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್ ಜಾಮೀನು ಸಿಗದೆ ಮೂರು ವರ್ಷಗಳಿಂದ ಜೈಲಿನಲ್ಲಿದ್ದ. ಮಗನನ್ನು ಜಾಮೀನಿನಲ್ಲಿ ಬಿಡಿಸಲು ಆತನ ತಾಯಿ ಥೆರೆಸಾ, ಮಹಿಳಾ ನ್ಯಾಯವಾದಿ ಮರೀನಾ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಮರೀನಾ 10 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದರೂ ಆರೋಪಿಗೆ ಜಾಮೀನು ಕೊಡಿಸಲು ವಿಫಲವಾಗಿದ್ದರಿಂದ ತಾಯಿ ಥೆರೆಸಾ, ತನ್ನ ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ವಕೀಲೆ 9 ಲಕ್ಷ ರೂ. ಮೊತ್ತದ 3 ಚೆಕ್ ನೀಡಿದ್ದು ಬಿಟ್ಟರೆ ಹಣ ಹಿಂದಿರುಗಿಸಲಿರಲಿಲ್ಲ.
ಹಣ ವಾಪಸ್ ನೀಡಲು ಒತ್ತಡ ಹೇರಿದಾಗ ಥೆರೆಸಾಗೆ ವಕೀಲೆ ಮರೀನಾ ಅವರು ಆರತಿ ಎಂಬವರನ್ನ ಪರಿಚಯಿಸಿದ್ದರು. ಅವರು ತನಗೆ ಹೈಕೋರ್ಟ್ ನ್ಯಾಯಮೂರ್ತಿಯ ಪರಿಚಯ ಇರುವುದಾಗಿ ಹೇಳಿ 72 ಸಾವಿರ ರೂ. ಪಡೆದಿದ್ದರು. ಆದರೆ ಯಾವುದೇ ಫಲ ನೀಡಿರಲಿಲ್ಲ. ಇದೇ ವೇಳೆ, ಮತ್ತೊಬ್ಬ ವಕೀಲೆ ದಯೀನಾ ಬಾನು ಪರಿಚಯವಾಗಿದ್ದು ಅವರು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಕೊಡಿಸಲು 50 ಲಕ್ಷ ರೂ. ಹಣವನ್ನು ಕೇಳುತ್ತಿದ್ದಾರೆ. ಹಣ ನೀಡಲು ಸಾಧ್ಯವಾಗದಿದ್ದರೆ ಜಾಮೀನು ಪಡೆಯಲು ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಇದರಿಂದ ಬೇಸತ್ತ ಥೆರೆಸಾ ಅವರು ವಕೀಲೆ ದಯೀನಾ ಬಾನು ಹೈಕೋರ್ಟ್ ನ್ಯಾಯಮೂರ್ತಿ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾಗಿ ಹೈಕೋರ್ಟ್ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been filed against advocate Dhahina Bhanu in Bangalore for allegedly misusing the name of a High Court judge and demanding 50 lakhs. The complaint has been registered at the Vidhana Soudha police station.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 12:04 pm
HK News Desk
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm