ಬ್ರೇಕಿಂಗ್ ನ್ಯೂಸ್
26-12-24 04:45 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.26: ಅಪರಾಧ ಪ್ರಕರಣದಲ್ಲಿ ಆರೋಪಿಗೆ ಜಾಮೀನು ಕೊಡಿಸುವ ನೆಪದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಹೆಸರಿನಲ್ಲಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ ಬಗ್ಗೆ ಮಹಿಳಾ ವಕೀಲರೊಬ್ಬರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್ ಜಂಟಿ ರಿಜಿಸ್ಟ್ರಾರ್ ಎಂ.ರಾಜೇಶ್ವರಿ ನೀಡಿದ ದೂರಿನಂತೆ ವಕೀಲೆ ದಯೀನಾ ಬಾನು ಎಂಬವರ ವಿರುದ್ಧ ಬಿಎನ್ಎಸ್ 318 (4) ಅಡಿ ವಿಧಾನಸೌಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣ ಒಂದರಲ್ಲಿ ಜಾಮೀನು ಕೊಡಿಸಲು ಹೈಕೋರ್ಟ್ ನ್ಯಾಯಮೂರ್ತಿ 50 ಲಕ್ಷ ರೂ. ಹಣ ಕೇಳುತ್ತಿದ್ದಾರೆ. ಹಣ ನೀಡದಿದ್ದರೆ ಜಾಮೀನು ಅರ್ಜಿಯನ್ನ ಬೇರೆ ವಕೀಲರಿಂದ ಮಾಡಿಸಿಕೊಳ್ಳಿ ಎಂದು ದಯೀನಾ ಬಾನು ಹೇಳಿರುವುದಾಗಿ ಎಫ್ಐಆರ್ ನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ 24 ವರ್ಷದ ವಿಷ್ಣುದೇವನ್ ಜಾಮೀನು ಸಿಗದೆ ಮೂರು ವರ್ಷಗಳಿಂದ ಜೈಲಿನಲ್ಲಿದ್ದ. ಮಗನನ್ನು ಜಾಮೀನಿನಲ್ಲಿ ಬಿಡಿಸಲು ಆತನ ತಾಯಿ ಥೆರೆಸಾ, ಮಹಿಳಾ ನ್ಯಾಯವಾದಿ ಮರೀನಾ ಫರ್ನಾಂಡಿಸ್ ಅವರನ್ನು ಭೇಟಿ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಮರೀನಾ 10 ಲಕ್ಷ ರೂ. ಹಣ ಪಡೆದಿದ್ದರು. ಹಣ ಪಡೆದರೂ ಆರೋಪಿಗೆ ಜಾಮೀನು ಕೊಡಿಸಲು ವಿಫಲವಾಗಿದ್ದರಿಂದ ತಾಯಿ ಥೆರೆಸಾ, ತನ್ನ ಹಣ ವಾಪಸ್ ನೀಡುವಂತೆ ಕೇಳಿದ್ದರು. ಆಗ ವಕೀಲೆ 9 ಲಕ್ಷ ರೂ. ಮೊತ್ತದ 3 ಚೆಕ್ ನೀಡಿದ್ದು ಬಿಟ್ಟರೆ ಹಣ ಹಿಂದಿರುಗಿಸಲಿರಲಿಲ್ಲ.
ಹಣ ವಾಪಸ್ ನೀಡಲು ಒತ್ತಡ ಹೇರಿದಾಗ ಥೆರೆಸಾಗೆ ವಕೀಲೆ ಮರೀನಾ ಅವರು ಆರತಿ ಎಂಬವರನ್ನ ಪರಿಚಯಿಸಿದ್ದರು. ಅವರು ತನಗೆ ಹೈಕೋರ್ಟ್ ನ್ಯಾಯಮೂರ್ತಿಯ ಪರಿಚಯ ಇರುವುದಾಗಿ ಹೇಳಿ 72 ಸಾವಿರ ರೂ. ಪಡೆದಿದ್ದರು. ಆದರೆ ಯಾವುದೇ ಫಲ ನೀಡಿರಲಿಲ್ಲ. ಇದೇ ವೇಳೆ, ಮತ್ತೊಬ್ಬ ವಕೀಲೆ ದಯೀನಾ ಬಾನು ಪರಿಚಯವಾಗಿದ್ದು ಅವರು ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಜಾಮೀನು ಕೊಡಿಸಲು 50 ಲಕ್ಷ ರೂ. ಹಣವನ್ನು ಕೇಳುತ್ತಿದ್ದಾರೆ. ಹಣ ನೀಡಲು ಸಾಧ್ಯವಾಗದಿದ್ದರೆ ಜಾಮೀನು ಪಡೆಯಲು ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಇದರಿಂದ ಬೇಸತ್ತ ಥೆರೆಸಾ ಅವರು ವಕೀಲೆ ದಯೀನಾ ಬಾನು ಹೈಕೋರ್ಟ್ ನ್ಯಾಯಮೂರ್ತಿ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾಗಿ ಹೈಕೋರ್ಟ್ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್ ಗಮನಕ್ಕೆ ತಂದಿದ್ದರು. ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
A case has been filed against advocate Dhahina Bhanu in Bangalore for allegedly misusing the name of a High Court judge and demanding 50 lakhs. The complaint has been registered at the Vidhana Soudha police station.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am