ಬ್ರೇಕಿಂಗ್ ನ್ಯೂಸ್
27-12-24 04:07 pm HK News Desk ಕರ್ನಾಟಕ
ಕಲಬುರಗಿ, ಡಿ.27: ಬೀದರ್ನಲ್ಲಿ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಂಚಾಳ ತನ್ನ ಡೆತ್ ನೋಟ್ ನಲ್ಲಿ ಬಿಜೆಪಿ ನಾಯಕರ ಹತ್ಯೆ ಸಂಚನ್ನು ಬಯಲು ಮಾಡಿದ್ದಾನೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಾಂಗ್ರೆಸ್ ಮುಖಂಡ ರಾಜು ಕಪನೂರು ಮತ್ತು ಗ್ಯಾಂಗ್ ಬಿಜೆಪಿ ಶಾಸಕ ಸೇರಿ ನಾಲ್ವರು ಪ್ರಮುಖರ ಕೊಲೆಗೆ ಸಂಚು ನಡೆಸಿದ್ದಾಗಿ ಉಲ್ಲೇಖ ಮಾಡಿದ್ದಾನೆ.
ರಾಜು ಕಪನೂರ್ ಗ್ಯಾಂಗ್ ಕಿರುಕುಳ ಮತ್ತು ಬೆದರಿಕೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿಯೂ ಸಚಿನ್ ಡೆತ್ ನೋಟಲ್ಲಿ ತಿಳಿಸಿದ್ದಾನೆ. ಇದಲ್ಲದೆ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ್ ಮತ್ತಿಮೂಡ್, ಕಲಬುರಗಿ ನಗರ ಬಿಜೆಪಿ ಜಿಲ್ಲಾಧ್ಯಕ್ಷ ಚಂದು ಪಾಟೀಲ್, ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಹಾಗೂ ಶ್ರೀರಾಮಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರ ಕೊಲೆಗೆ ಸಂಚು ನಡೆದಿರೋದಾಗಿ ಹೇಳಿಕೊಂಡಿದ್ದಾನೆ.
ಸಚಿನ್ ಬರೆದ ಏಳು ಪುಟಗಳ ಡೆತ್ ನೋಟ್ ನಲ್ಲಿ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಮಾಡಿದ್ದಾನೆ ಎನ್ನಲಾದ ಸಂಚನ್ನು ಉಲ್ಲೇಖವಾಗಿದೆ. ಸದ್ಯ ಈ ವಿಚಾರ ಮುನ್ನೆಲೆಗೆ ಬಂದಿದ್ದು ಕಾಂಗ್ರೆಸ್ ನಾಯಕ, ಬಿಜೆಪಿ ಪ್ರಮುಖರ ಕೊಲೆಗೆ ಸಂಚು ನಡೆಸಿದ್ದಾರೆ ಎನ್ನುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೊಲೆ ಸಂಚಿನ ಕುರಿತಾಗಿ ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಷ್ಟ್ರೀಯ ಗೌರವಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿಕೆ ನೀಡಿದ್ದು ಬೀದರ್ ಜಿಲ್ಲೆಯಲ್ಲಿ ನಡೆದ ಘಟನೆ ಮನುಕುಲವೇ ಮರುಗುವ ಘಟನೆಯಾಗಿದ್ದು 26 ವರ್ಷದ ಯುವಕ ಸುದೀರ್ಘ ಏಳು ಪುಟಗಳ ಡೆತ್ ನೋಟ್ ಬರೆದು ರೈಲು ಹಳಿಗೆ ಕತ್ತನ್ನ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಬರಹದಲ್ಲಿ ಎಲ್ಲವು ಕಲಬುರಗಿ ಕಡೆ ಬೆರಳು ಮಾಡಿ ತೋರಿಸಿದೆ. ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಯಾರು ಕಾರಣ ಅಂತಾ ಬರೆದಿದ್ದಾರೆ. ಜೊತೆಗೆ ರಾಜು ಕಪನೂರ್ ಗ್ಯಾಂಗ್ ಕಲಬುರಗಿಯ ಪ್ರತಿಷ್ಟಿತರ ಕೊಲೆಗೆ ಸಂಚು ಮಾಡಿರುವ ಉಲ್ಲೇಖ ಮಾಡಿದ್ದಾರೆ.
ಶಾಸಕರು ಬಿಜೆಪಿ ನಾಯಕರು ನನ್ನನ್ನು ಸೇರಿ ಕೊಲೆಗೆ ಸಂಚು ರೂಪಿಸಿದ್ದಾರೆ. ಯಾವ ಕಾರಣಕ್ಕೆ ಈ ಮುಖಂಡರ ಕೊಲೆಗೆ ಯತ್ನ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು. ಇದನ್ನ ಸರ್ಕಾರ ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಆ ಯುವಕನನ್ನು ಈ ಗ್ಯಾಂಗ್, ಉಸ್ತುವಾರಿ ಸಚಿವ ಖರ್ಗೆಯವರಿಗೆ ಭೇಟಿ ಮಾಡಿಸಿದ್ದಾಗಿ ಬರೆದಿದ್ದಾನೆ. ಉಸ್ತುವಾರಿ ಸಚಿವರ ಕೃಪಾಕಟಾಕ್ಷ ಈ ಗ್ಯಾಂಗ್ ಮೇಲಿದೆ. ಇವರ ನಾಯಕರೇ ಹೊಡೀರಿ ಬಡೀರಿ ಅಂತ ಹೇಳಿದ ಮೇಲೆ ಇವರು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಉಸ್ತುವಾರಿ ಸಚಿವರು ಇದ್ದಾರೆ ಅಂತ ಆನೆ ನಡೆದಿದ್ದೇ ದಾರಿ ಅನ್ನೋ ಹಾಗೆ ಇವರ ದುಷ್ಕೃತ್ಯ ನಡೆದಿದೆ. ಕಲಬುರಗಿ ಉಸ್ತುವಾರಿ ಸಚಿವರು ಮತ್ತು ಅವರ ಗ್ಯಾಂಗ್ ಬಿಹಾರ್ ರೀತಿಯಲ್ಲಿ ಬೇದರಿಕೆ ಹಾಕ್ತಿದ್ದಾರೆ. ನೀವೆಲ್ಲಾ ತಿಹಾರ್ ಜೈಲಿನಲ್ಲಿರಬೇಕಾದವರು ವಿಧಾನಸೌಧದಲ್ಲಿ ಇದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Contractor dies by suicide in Bidar after harrasment by Congress leader Priyank Kharges aide, plot to murder four exposed in death note. According to PTI, Sachin Panchal, a resident of Tungadakatti in Bhalki Taluk, Bidar, had undertaken a contract in the Rural Development and Panchayat Raj Department.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm