ಬ್ರೇಕಿಂಗ್ ನ್ಯೂಸ್
30-12-24 01:13 pm HK News Desk ಕರ್ನಾಟಕ
ಮಡಿಕೇರಿ, ಡಿ.30: ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಬಿದ್ದು ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಕೊಡಗು ಮೂಲದ ಯೋಧ ದಿವಿನ್ (28) ನಾಲ್ಕು ದಿನಗಳ ನಂತರ ಸಾವನ್ನಪ್ಪಿದ್ದಾರೆ.
ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು ಕಂಡಿದ್ದಾರೆ. ಮೃತ ದಿವಿನ್ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದ ನಿವಾಸಿ. ತಂದೆ ತಾಯಿಗೆ ಏಕೈಕ ಮಗನಾಗಿದ್ದ ದಿವಿನ್ 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು.
ಅಪಘಾತದಲ್ಲಿ ದಿವಿನ್ ತೀವ್ರ ಗಾಯಗೊಂಡಿದ್ದರಿಂದ ಸೇನೆಯ ಅಧಿಕಾರಿಗಳ ತುರ್ತು ಕರೆಯಿಂದಾಗಿ ಯೋಧನ ತಾಯಿ ಶ್ರೀನಗರ ತೆರಳಿದ್ದರು. ಯೋಧ ದಿವಿನ್ ಕಳೆದ ಬಾರಿ ಊರಿಗೆ ಬಂದಿದ್ದಾಗ ಕೊಡಗಿನ ಹುಡುಗಿ ಜೊತೆಗೆ ಮದುವೆ ನಿಶ್ಚಯವಾಗಿದ್ದು ಜನವರಿಯಲ್ಲಿ ಮದುವೆಗೆ ದಿನಾಂಕವೂ ನಿಗದಿಯಾಗಿತ್ತು.
ಶ್ರೀನಗರದ ಸೇನಾ ಆಸ್ಪತ್ರೆಯಲ್ಲಿದ್ದ ಯೋಧನನ್ನು ತಾಯಿ ಜಯ ಅವರು ತೆರಳಿ ಮಾತನಾಡಿಸಿದ್ದಾಗ ಅಮ್ಮನ ಕರೆಗೆ ದಿವಿನ್ ಹುಬ್ಬು ಹಾರಿಸಿ ಸ್ಪಂದಿಸಿದ್ದರು. ಶ್ವಾಸಕೋಶಕ್ಕೆ ತೀವ್ರ ಹಾನಿ ಆಗಿದ್ದರಿಂದ ಭಾನುವಾರ ರಾತ್ರಿ ದಿವಿನ್ ಕೊನೆಯುಸಿರು ಎಳೆದಿದ್ದಾರೆ.
ಸೇನಾ ವಾಹನ ಪ್ರಪಾತಕ್ಕೆ ಬಿದ್ದು ಅದರಲ್ಲಿದ್ದ ನಾಲ್ವರು ಸೈನಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕೊಡಗಿನ ಯೋಧ ದಿವಿನ್ ಗಂಭೀರ ಗಾಯಗೊಂಡಿದ್ದರು.
A soldier from Kodagu district, who was seriously injured after a vehicle fell into a gorge near a forward post in Jammu and Kashmir's Poonch last Tuesday, succumbed to his injuries.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am