ಬ್ರೇಕಿಂಗ್ ನ್ಯೂಸ್
01-01-25 11:03 pm HK News Desk ಕರ್ನಾಟಕ
ಹಾಸನ, ಜ 01: ಹೊಸ ವರ್ಷದ ಆಚರಣೆ ಮಾಡುವ ಸಂದರ್ಭದಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಜಿಲ್ಲೆಯಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಬಡಾವಣೆಯ ನಿವಾಸಿಗಳಾದ ಅಜಿತ್ (30 ) ಹಾಗೂ ಅಶೋಕ್ (35) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದವರು. ಮಂಗಳವಾರ ರಾತ್ರಿ ಹೊಸ ವರ್ಷದ ಆಚರಣೆಗೆ ಬೇಲೂರಿನ ಮಲಸಾವರ ಗ್ರಾಮದ ಲಕ್ಷ್ಮಿಪುರ ಕೆರೆ ಏರಿಯ ಮೇಲೆ ಯುವಕರು ಪಾರ್ಟಿ ಮಾಡಿದ್ದಾರೆ. ಆದರೆ, ಬುಧವಾರ ಬೆಳಿಗ್ಗೆಯಾದರೂ ಮನೆಗೆ ಯುವಕರು ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಕೆರೆಯ ಏರಿಯ ಮೇಲೆ ವಾಹನ, ಚಪ್ಪಲಿಗಳು ಕಂಡು ಬಂದಿವೆ.
ಈ ಬಗ್ಗೆ ಸಂಶಯಗೊಂಡ ಗ್ರಾಮಸ್ಥರು ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಸಿಬ್ಬಂದಿ, ಕೆರೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಂಜೆ ವೇಳೆಗೆ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಈ ಬಗ್ಗೆ ಅರೇಹಳ್ಳಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆ ಕುರಿತಂತೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
Two youths killed after Drowning inside the lake during new year party in Hassan. The deceased has been identified as Ajith and Ashok.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm