ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm