ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
05-02-25 12:29 pm
Bangalore Correspondent
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
Two-wheeler rider fined, Bangalore Traffic: ಎ...
04-02-25 03:09 pm
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
04-02-25 07:47 pm
Mangalore Correspondent
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am