ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 06:14 pm
Mangalore Correspondent
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm