ಬ್ರೇಕಿಂಗ್ ನ್ಯೂಸ್
03-01-25 10:47 pm HK News Desk ಕರ್ನಾಟಕ
ಶಿವಮೊಗ್ಗ, ಜ.3: ಹೊಸ ವರ್ಷಾಚರಣೆಯ ನೆಪದಲ್ಲಿ ಬಿಜೆಪಿ ಎಂಎಲ್ಸಿ ಡಾ.ಧನಂಜಯ್ ಸರ್ಜಿ ಅವರ ಹೆಸರಿನಲ್ಲಿ ವಿಷಪೂರಿತ ಸಿಹಿತಿಂಡಿಗಳ ಬಾಕ್ಸ್ಗಳನ್ನು ಕಳುಹಿಸಿಕೊಟ್ಟಿದ್ದು ಅಪರಿಚಿತ ದುಷ್ಕರ್ಮಿಗಳ ವಿರುದ್ಧ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದಾರೆ.
ಸಿಹಿತಿಂಡಿಗಳ ಬಾಕ್ಸ್ ಅನ್ನು ಸರ್ಜಿ ಹೆಸರಿನಲ್ಲಿ ಮೂವರಿಗೆ ಪೋಸ್ಟ್ ಮಾಡಲಾಗಿದ್ದು ಈ ಪೈಕಿ ನ್ಯಾಷನಲ್ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಎಸ್.ಎನ್ ನಾಗರಾಜ್ ಸಹ ಒಬ್ಬರು. ದೂರಿನ ಪ್ರಕಾರ, ಜನವರಿ 1 ರಂದು ಅನಾಮಧೇಯ ವ್ಯಕ್ತಿಗಳು ಡಾ. ಸರ್ಜಿ ಅವರ ಹೆಸರನ್ನು ಬಳಸಿಕೊಂಡು, DTDC ಕೊರಿಯರ್ ಮೂಲಕ ಹೊಸ ವರ್ಷದ ಶುಭಾಶಯ ಪತ್ರದ ಜೊತೆಗೆ ಸಿಹಿತಿಂಡಿಗಳ ಬಾಕ್ಸ್ ಕಳುಹಿಸಿದ್ದಾರೆ. ಬಾಕ್ಸ್ ಸ್ವೀಕರಿಸಿದ ನಾಗರಾಜ್ ಅವರು ಕೆಲವು ಸಿಹಿತಿಂಡಿಗಳನ್ನು ಸೇವಿಸಿದ್ದಾರೆ ಮತ್ತು ಸಿಹಿ ತಿಂಡಿಗಳು ತೀವ್ರ ಕಹಿಯಾಗಿರುವುದನ್ನು ಗಮನಿಸಿದ್ದಾರೆ.
ಕೂಡಲೇ ನಾಗರಾಜ್ ಅವರು ಡಾ. ಸರ್ಜಿ ಅವರನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದಾರೆ. ಡಾಕ್ಟರ್ ಸರ್ಜಿ ಅವರು ತಾನು ಯಾವುದೇ ಸಿಹಿತಿಂಡಿಗಳನ್ನು ಕಳುಹಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ ಇದು ಅವರ ಹೆಸರಿನಲ್ಲಿ ಕಳುಹಿಸಲಾದ ಸಿಹಿತಿಂಡಿಯಾಗಿದ್ದು, ವಿಷ ಪದಾರ್ಥ ಕಲಬೆರಕೆ ಮಾಡಿರಬಹುದು ಎಂಬ ಅನುಮಾನ ಹುಟ್ಟುಹಾಕಿದೆ.
ಸಿಹಿತಿಂಡಿ ಮತ್ತು ಅನಾಮಧೇಯ ಪತ್ರ ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 123 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ತನಿಖೆಗಾಗಿ ಪೊಲೀಸರು ಸಿಹಿತಿಂಡಿಗಳ ಬಾಕ್ಸ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಇದೇ ರೀತಿಯ ಸಿಹಿತಿಂಡಿಯ ಪೆಟ್ಟಿಗೆಗಳನ್ನು ಅರವಿಂದ್ ಮತ್ತು ಪವಿತ್ರಾ ಎಂಬ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ. ಭದ್ರಾವತಿಯಿಂದ ಕೊರಿಯರ್ ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
BJP MLC Dhananjaya Sarji has alleged that unknown people sent suspicious boxes in his name to several people in Shivamogga, in the guise of extending New Year wishes. His office has filed a complaint with the Shivamogga police in this regard.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am