ಬ್ರೇಕಿಂಗ್ ನ್ಯೂಸ್
04-01-25 01:28 pm HK News Desk ಕರ್ನಾಟಕ
ಗದಗ, ಜ 03: ಹೈಸ್ಕೂಲ್ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ SUV ಕಾರು ಅಪಘಾತವಾಗಿ ಇಬ್ಬರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ರೂರಲ್ ಇಂಜಿನಿಯರಿಂಗ್ ಕಾಲೇಜ್ ಬಳಿ ಘಟನೆ ನಡೆದಿದೆ.
ಹುಲಕೋಟಿ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯಲ್ಲಿ ವಿದ್ಯಾರ್ಥಿಗಳು 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ಕಾರು ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ವೇಗವಾಗಿ ಕಾರು ಚಲಿಸುತ್ತಿದ್ದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.


ಮಹಮ್ಮದ್ ಮುಜಾವರ್ (16), ಸಂಜೀವ್ ಗಿರಡ್ಡಿ (16) ಮೃತಪಟ್ಟಿದ್ದಾರೆ. ಆಶಿಸ್ ಗುಂಡುರ್ (16) ಸೇರಿದಂತೆ ಮತ್ತೋರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿವೆ.




ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮುಗಿಸಿ ತಡರಾತ್ರಿ ಬರುವ ವೇಳೆ ಅಪಘಾತ ಸಂಭವಿಸಿದೆ. ನಾಲ್ಕು ಜನ ವಿದ್ಯಾರ್ಥಿಗಳು ಮಾತ್ರ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಸ್ಕೂಲ್ ಗ್ಯಾದರಿಂಗ್ ಡ್ಯಾನ್ಸ್ ಮುಗಿಸಿಕೊಂಡು ಜೋಶ್ನಲ್ಲಿ ವಾಪಸ್ ಆಗುತ್ತಿದ್ದರು. ಅತಿಯಾದ ವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಮೃತರ ದೇಹಗಳು ಹಾಗೂ ಓರ್ವ ಗಾಯಾಳು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮತ್ತೋರ್ವ ಗಾಯಾಳು ವಿದ್ಯಾರ್ಥಿಯನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿ ರಭಸಕ್ಕೆ ಕಾರು ಅಪ್ಪಚ್ಚಿಯಾಗಿದೆ.
ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Gadag Car accident, two Minor students of SSLC killed on spot. Two other friends have been injured. The deceased have been identified as Mohammed Mujamar and Sanjeev Giradi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm