ಬ್ರೇಕಿಂಗ್ ನ್ಯೂಸ್
04-01-25 06:49 pm Bangalore Correspondent ಕರ್ನಾಟಕ
ಬೆಂಗಳೂರು, ಜ.4: ರಾಜ್ಯದಲ್ಲಿ ಕೆಎಸ್ಸಾರ್ಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಬಸ್ಸುಗಳ ದರವನ್ನು 15 ಶೇಕಡಾ ಏರಿಸಲು ಸರ್ಕಾರ ನಿರ್ಧಾರ ಕೈಗೊಂಡಿದ್ದರೂ, ಖಾಸಗಿ ಬಸ್ಸು ಮಾಲಕರು ದರ ಏರಿಸದಿರುವ ನಿರ್ಧಾರಕ್ಕೆ ಬಂದಿದ್ದಾರೆ. ಈಗಾಗಲೇ ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರಿಗೆ ಫ್ರೀ ನೀಡುವ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ಸುಗಳಿಗೆ ಪೆಟ್ಟು ಬಿದ್ದಿದೆ.
ಮತ್ತೆ ಖಾಸಗಿ ಬಸ್ ದರ ಏರಿಕೆ ಮಾಡಿದರೆ ಅದರಿಂದ ಪೆಟ್ಟು ಬೀಳಬಹುದೆಂಬ ಲೆಕ್ಕಾಚಾರ ಬಸ್ ಮಾಲಕರಲ್ಲಿದೆ. ಹೀಗಾಗಿ ಕೆಎಸ್ಸಾರ್ಟಿಸಿ ಬಸ್ ದರ ಏರಿಕೆಯಾದರೂ, ಖಾಸಗಿ ಬಸ್ ದರ ಏರಿಸದಿರಲು ನಿರ್ಧಾರ ಕೈಗೊಂಡಿದ್ದಾರೆ. ಜೊತೆಗೆ ಕಡಿಮೆ ದರ ಇದ್ದರೆ ಪ್ರಯಾಣಿಕರ ಸಂಖ್ಯೆ ಹೆಚ್ಚಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.
ಕರ್ನಾಟಕ ರಾಜ್ಯ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಎಸ್.ನಟರಾಜ್ ಶರ್ಮಾ ಪ್ರತಿಕ್ರಿಯಿಸಿದ್ದು, ನಾವು ಬಸ್ ಮಾಲಕರಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ಹೊತ್ತಿನಲ್ಲಿ ದರ ಏರಿಸಿದರೆ ಅದರಿಂದ ಮತ್ತೆ ಕೇಡು ಆಗಬಹುದು. ಹಾಗಾಗಿ ತಕ್ಷಣಕ್ಕೆ ಟಿಕೆಟ್ ದರ ಏರಿಸುವುದು ಬೇಡ ಎನ್ನುತ್ತಿದ್ದಾರೆ. ಈಗಾಗಲೇ ಶಕ್ತಿ ಯೋಜನೆಯಿಂದ ಖಾಸಗಿ ಬಸ್ಸುಗಳಿಗೆ ಪೆಟ್ಟು ಬಿದ್ದಿದೆ. ಸರ್ಕಾರಿ ಬಸ್ಸುಗಳಲ್ಲಿ ಈಗ ದರ ಏರಿಕೆ ಮಾಡಿರುವುದು ಕೆಎಸ್ಸಾರ್ಟಿಸಿಗೆ ಹಿನ್ನಡೆಯಾಗಲಿದ್ದು, ಅಲ್ಲಿನ ಪ್ರಯಾಣಿಕರು 10 ಶೇಕಡವಾದರೂ ಖಾಸಗಿಯತ್ತ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅತಿ ಹೆಚ್ಚು ಖಾಸಗಿ ಬಸ್ಸುಗಳಿರುವ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬಸ್ ಮಾಲಕರು ದರ ಏರಿಸದಿರಲು ನಿರ್ಧರಿಸಿದ್ದಾರೆ. ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ, ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಬಸ್ ಗಳಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಜೊತೆಗೆ ವಾಹನಗಳ ಬಿಡಿಭಾಗ, ಡೀಸೆಲ್ ಬೆಲೆಯೇರಿಕೆಯಿಂದಾಗಿ ದರ ಹೆಚ್ಚಳ ಅಗತ್ಯವಿದೆ. ಆದರೆ ಸದ್ಯಕ್ಕೆ ಟಿಕೆಟ್ ದರ ಏರಿಸುವ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಸಂಘದ ಪದಾಧಿಕಾರಿಗಳ ಸಭೆ ಕರೆದು ನಿರ್ಧರಿಸುತ್ತೇವೆ ಎಂದಿದ್ದಾರೆ.
ಖಾಸಗಿ ಬಸ್ ದರ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ನೇರವಾಗಿ ಖಾಸಗಿ ಬಸ್ಸುಗಳು ದರ ಏರಿಸುವಂತಿಲ್ಲ. ಅವರು ಪ್ರಸ್ತಾವನೆ ನೀಡಿದರೆ ನಾವು ನಿರ್ಧರಿಸುತ್ತೇವೆ ಎಂದಿದ್ದಾರೆ.
Private Bus fare won't be increased after government increase fare price of buses. Karnataka Transport Minister Ramalinga Reddy on Friday justified 15 per cent increase in government bus fares across the board and hit out at the BJP for its protest against the hike.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm