ಬ್ರೇಕಿಂಗ್ ನ್ಯೂಸ್
05-01-25 07:36 pm HK News Desk ಕರ್ನಾಟಕ
ಮೈಸೂರು, ಜ.5: ಕಾಂಗ್ರೆಸ್ ಅವಧಿಯಲ್ಲಿ ಲಂಚ ಶೇ.60 ತಲುಪಿದೆ. ಇದನ್ನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಒಪ್ಪಿಕೊಂಡಿದ್ದಾರೆ. ವಿಧಾನಸೌಧ ಒಳಗಡೆಯೇ ಸಚಿವರು ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಮನೆ ಹಂಚಿಕೆಯಲ್ಲೂ ಲಂಚ ಪಡೆಯಲಾಗುತ್ತಿದೆ. ಮೊದಲು ಪಿಡಿಒ ಲಂಚ ಪಡೆಯುತ್ತಿದ್ದ, ಈಗ ವಿಧಾನಸೌಧಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ. ಸತ್ಯಮೇವಾ ಜಯತೇ ಎಂಬಂತೆ ಸಿದ್ದರಾಮಯ್ಯ ನಡೆದುಕೊಳ್ಳುತ್ತಿದ್ದಾರಾ? ಅವರ ಆತ್ಮಕ್ಕೆ ಅವರು ಉತ್ತರ ಕೊಟ್ಟುಕೊಳ್ಳಲಿ. ಹಣ ಲೂಟಿ ಮಾಡುವುದಕ್ಕೆ ಇತಿಮಿತಿ ಇಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಇದನ್ನ ನೋಡಿದ್ರೆ ಹಿಂದಿನ ಬಿಜೆಪಿ ಸರ್ಕಾರವೇ ಚೆನ್ನಾಗಿತ್ತು ಎನ್ನುತ್ತಿದ್ದಾರೆ ಕಾಂಗ್ರೆಸ್ ಪರ ಗುತ್ತಿಗೆದಾರರು. ಇದಕ್ಕೆಲ್ಲಾ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಬೆಲೆ ತರಬೇಕಾಗುತ್ತದೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಎಚ್.ಡಿ ಕೆ ಭವಿಷ್ಯ ನುಡಿದರು.
ಬಸ್ ದರ ಶೇ 15 ರಷ್ಟು ಏರಿಕೆ ವಿಚಾರದ ಪ್ರಶ್ನೆಗೆ, ಸರ್ಕಾರ ಗ್ಯಾರೆಂಟಿಯನ್ನ ನಿಲ್ಲಿಸಲು ಕಾರಣವನ್ನ ಹುಡುಕುತ್ತಿದೆ. ಹೇಗಾದರು ಮಾಡಿ ಗ್ಯಾರೆಂಟಿ ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಅವರಿಂದಲೇ ಕಿತ್ತು ಅವರಿಗೆ ಕೊಡುವ ಕೆಲಸವನ್ನ ಸರ್ಕಾರ ಮಾಡಬಾರದು. ಮಧ್ಯಮ ವರ್ಗದ ಜನರ ಬದುಕಿನ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅತ್ತೆಯದನ್ನ ಅಳಿಯ ದಾನ ಮಾಡಿದ ಅನ್ನೋ ಮಾತಿನಂತೆ ಅವರಿಂದ ಕಿತ್ತು ಇವರಿಗೆ ಕೊಡೋಕೆ ಇವರೇ ಆಗಬೇಕಾ.. ಎಂದು ಸಾರಿಗೆ ದರ ಏರಿಕೆ ಬಗ್ಗೆ ಕುಮಾರಸ್ವಾಮಿ ಕುಹಕವಾಡಿದ್ದಾರೆ.
ಜನಸಾಮಾನ್ಯರಿಗೆ ಇದು ಹೊರಯಾಗಲಿದೆ. ಯಾವುದೇ ಮಂತ್ರಿ ಮಕ್ಕಳು, ಶಾಸಕರ ಮಕ್ಕಳು ಬಸ್ ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನಸಾಮಾನ್ಯರು. ದಿನಕ್ಕೆ 10 ರೂಪಾಯಿ ಹೆಚ್ಚಿಗೆಯಾದ್ರು ಅದು ಅವರಿಗೆ ಹೊರೆಯಾಗಲಿದೆ ಎಂದು ಕೇಂದ್ರ ಸಚಿವ ಎಚ್.ಡಿ ಕೆ ಹೇಳಿದರು.
Bribery has reached 60% during the Congress term. This has been admitted by Congress party workers. Union Minister H.D. Kumaraswamy has dropped a new bombshell, saying that ministers are taking bribes inside the Vidhan Soudha itself.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 01:48 pm
Mangaluru Staffer
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
Mangalore Accident, Kalladka: ಶಿವರಾತ್ರಿ ಉತ್ಸವ...
15-02-26 08:52 pm
Pumpwell Road Close, Mangalore: ಪಂಪ್ವೆಲ್ ಸರ್...
14-02-26 07:16 pm
CT Ravi, Mangalore: ಕಾಂಗ್ರೆಸ್ ಸಂಭ್ರಮ ಭ್ರಷ್ಟಾ...
14-02-26 05:16 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm