ಬ್ರೇಕಿಂಗ್ ನ್ಯೂಸ್
05-01-25 10:56 pm Bangalore Correspondent ಕರ್ನಾಟಕ
ಬೆಂಗಳೂರು, ಜ 05 : ವಿಧಾನ ಪರಿಷತ್ ನಲ್ಲಿ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ದೂರು, ಪ್ರತಿ ದೂರುಗಳು ದಾಖಲಾಗುತ್ತಲೇ ಇವೆ. ಇದೀಗ ಸಿಟಿ ರವಿ ಡಿಸೆಂಬರ್ 19ರಂದು ಬೆಳಗಾವಿಯಲ್ಲಿ ತಮ್ಮ ಬಂಧನದ ವೇಳೆ ಪೊಲೀಸ್ ದೌರ್ಜನ್ಯ ನಡೆದಿದ್ದು ಇದರ ಬಗ್ಗೆ 13 ಪುಟಗಳ ದೂರನ್ನು ಇ-ಮೇಲ್ ಮೂಲಕ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಸಲ್ಲಿಸಿದ್ದಾರೆ.
ಸಿಟಿ ತಮ್ಮ ದೂರಿನಲ್ಲಿ ಡಿಸಿಎಂ ಡಿಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರನ್ನು ಉಲ್ಲೇಖಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್, ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಿಂಸೆ ತಡೆಯುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಜಿಪಿ ಇನ್ನೂ ಕ್ರಮ ಕೈಗೊಂಡಿಲ್ಲ ಎಂದು ಆರೋಪ ಮಾಡಿದ್ದಾರೆ.
ಇದೇ ವೇಳೆ ಪ್ರಕರಣ ದಾಖಲಿಸಿಕೊಂಡಿರುವ ಸಿಐಡಿ ತನಿಖೆ ಕೈಗೊಂಡು ದಾಖಲೆಗಳನ್ನ ಸಂಗ್ರಹಿಸುತ್ತಿದ್ದು, ಸಿಟಿ ರವಿಗೂ ನೋಟಿಸ್ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮತ್ತೊಂದು ಕಡೆ ರಾಜ್ಯಪಾಲರಿಗೆ, ಡಿಐಜಿ ಅಲೋಕ್ ಮೋಹನ್ ಅವರಿಗೆ ಸಿಟಿ ರವಿ ದೂರು ನೀಡಿದ್ದು, ನಾನು ಕೊಟ್ಟ ದೂರಿನ ಸಂಬಂಧ ಎಫ್ಐಆರ್ ಆಗಿಲ್ಲವೆಂದು ಕಿಡಿಕಾರಿದ್ದಾರೆ.
ತನಗೆ ಇನ್ನೂ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ
ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಸಿಟಿ ರವಿ ಮನವಿ ಮಾಡಿದ್ದಾರೆ.
‘ಈ ಸಂಚಿನಲ್ಲಿ ಪೊಲೀಸ್ ಮಹಾ ನಿರ್ದೇಶಕ, ಪೊಲೀಸ್ ಆಯುಕ್ತ, ಎಸ್ಪಿ ಮತ್ತು ಅಧೀನ ಅಧಿಕಾರಿಗಳು ನೇರವಾಗಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನನಗಾಗಿರುವ ಅನ್ಯಾಯಕ್ಕೆ ₹1 ಕೋಟಿ ಪರಿಹಾರ ಕೊಡಬೇಕು. ಅದನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡಬೇಕು’ ಎಂದು ಮನವಿ ಮಾಡಿಕೊಂಡಿದ್ದಾರೆ.
CT Ravi writes letter to Human rights, demands for protection. Complains against DK Shivakumar and Lakshami Hebbalkar.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm