ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm