ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm