ಬ್ರೇಕಿಂಗ್ ನ್ಯೂಸ್
06-01-25 01:01 pm Bangalore Correspondent ಕರ್ನಾಟಕ
ಬೆಂಗಳೂರು, ಜ 06: ಹಾಸ್ಟೆಲ್ ಕಟ್ಟಡದ 3ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ) ಸ್ನಾತಕೋತ್ತರ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಮೃತನನ್ನು ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ಗುಜರಾತ್ ಮೂಲದ ನಿಲಯ್ ಕೈಲಾಶ್ಭಾಯ್ ಪಟೇಲ್ (28) ಎಂದು ಗುರುತಿಸಲಾಗಿದೆ.
ಶನಿವಾರ ನಿಲಯ್ ತನ್ನ ಹುಟ್ಟುಹಬ್ಬವಿದ್ದ ಕಾರಣ ಸ್ನೇಹಿತರೊಂದಿಗೆ ಹೊರಗಡೆ ತೆರಳಿದ್ದ. ನಂತರ ಹಾಸ್ಟೆಲ್ನಲ್ಲಿರುವ ಸ್ನೇಹಿತನ ಕೊಠಡಿಯಲ್ಲಿ ನಿಲಯ್ ಹುಟ್ಟುಹಬ್ಬ ಆಚರಿಸಲಾಗಿತ್ತು. ಬಳಿಕ ತನ್ನ ಕೋಣೆಗೆ ಹಿಂತಿರುಗುತ್ತಿದ್ದಾಗ ಅವಘಡ ಸಂಭವಿಸಿದೆ. ಭಾನುವಾರ ಬೆಳಗ್ಗೆ ಹಾಸ್ಟೆಲ್ ಭದ್ರತಾ ಸಿಬ್ಬಂದಿ ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಯಾಂಪಸ್ ಆವರಣದ ಹಾಸ್ಟೆಲ್ನ ಬೇರೆ ಬ್ಲಾಕ್ನಲ್ಲಿರುವ ಸ್ನೇಹಿತರ ಕೋಣೆಯಲ್ಲಿ ಹುಟ್ಟುಹಬ್ಬ ಆಚರಿಸಲು ನಿಲಯ್ ತೆರಳಿದ್ದ. ರಾತ್ರಿ 11.30ರ ಸುಮಾರಿಗೆ ಸ್ನೇಹಿತನ ಕೊಠಡಿಯಿಂದ ಹೊರಟು 'F' ಬ್ಲಾಕ್ನಲ್ಲಿರುವ ತನ್ನ ಕೋಣೆಗೆ ವಾಪಸಾಗುವಾಗ ಘಟನೆ ಸಂಭವಿಸಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಹಾಸ್ಟೆಲ್ನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಭಾನುವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ನಿಲಯ್ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ನಿಲಯ್ ಸಾವಿನ ಕುರಿತು ಸ್ಪಷ್ಟನೆ ನೀಡುವಂತೆ ಅಖಿಲ ಭಾರತ ಒಬಿಸಿ ವಿದ್ಯಾರ್ಥಿಗಳ ಸಂಘ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ಗೆ ಒತ್ತಾಯಿಸಿದೆ.
Bangalore IIM indian management 28 year old student dies after falling from 3rd floor of college hostel. The deceased has been identified as Kailesh Patil.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm