ಬ್ರೇಕಿಂಗ್ ನ್ಯೂಸ್
06-01-25 09:41 pm Bengaluru Correspondent ಕರ್ನಾಟಕ
ಬೆಂಗಳೂರು, ಜ.6: ಕನ್ನಡ ಟಿವಿ ಮಾಧ್ಯಮಗಳಲ್ಲಿ ಚೀನಾದಲ್ಲಿ ಎಚ್ ಎಂಪಿವಿ ವೈರಸ್ ನಿಂದಾಗಿ ಎಮರ್ಜೆನ್ಸಿಯಾಗಿದೆ, ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ ಎಂದು ಸುದ್ದಿ ಬಿತ್ತರವಾಗುತ್ತಿರುವುದನ್ನು ಅಲ್ಲಿರುವ ಕನ್ನಡಿಗರು ಅಣಕಿಸಿ ವಿಡಿಯೋ ಮಾಡಿದ್ದಾರೆ. ಯಾವುದೇ ಆತಂಕದ ಸ್ಥಿತಿ ಇಲ್ಲ. ಚೀನಾದ ಜನರು ಸಹಜ ರೀತಿಯಲ್ಲಿದ್ದಾರೆ ಎಂದು ಯೂಟ್ಯೂಬ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಚೀನಾದಲ್ಲಿ ಎಚ್ಎಂಪಿವಿ ವೈರಸ್ ತುರ್ತು ಸ್ಥಿತಿಯಾಗಿದೆ, ಶವಾಗಾರದಲ್ಲಿ ಜನರು ಕ್ಯೂ ನಿಲ್ಲುವಂತಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿರುವುದನ್ನು ತಿಳಿದು ಯಾವುದೋ ವಿಡಿಯೋ ತೋರಿಸಿ ಜನರನ್ನು ಗಾಬರಿಗೊಳಿಸಬೇಡಿ, ಅಂತಹ ಸ್ಥಿತಿಯೇನೂ ಇಲ್ಲ ಎಂದು ತಾವೇ ಅಲ್ಲಿನ ಸ್ಥಿತಿಯನ್ನು ತೋರಿಸಿದ್ದಾರೆ. ಮಾಧ್ಯಮಗಳಲ್ಲಿ ತೋರಿಸುತ್ತಿರುವ ಸುದ್ದಿಗೂ ಚೀನಾದಲ್ಲಿನ ಪರಿಸ್ಥಿತಿಗೂ ಭಿನ್ನವಾಗಿದೆ ಎಂದು ಕನ್ನಡಿಗರು ವಿಡಿಯೋ ಮಾಡಿ ಹೇಳುತ್ತಿದ್ದಾರೆ.



ಚೀನಾದಲ್ಲಿರುವ ಕನ್ನಡಿಗ ಶಶಿ ಶಿರಗುಪ್ಪಿ ಅವರು ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ವಿಡಿಯೋ ಮಾಡಿದ್ದು ಚೀನಾದ ಪರಿಸ್ಥಿತಿಯನ್ನು ಚೆನ್ನಾಗಿಯೇ ವಿವರಿಸಿದ್ದಾರೆ. ಚೀನಾದಲ್ಲಿ ಚಳಿಗಾಲದಲ್ಲಿ ಮಾಸ್ಕ್ ಹಾಕಿ ಕೆಲವರು ತಿರುಗಾಡುವುದು ಸಹಜ. ನೀವು ಅಂದ್ಕೊಂಡ ಹಾಗೆ ಎಚ್ ಎಂಪಿವಿ ವೈರಸ್ ಹಾವಳಿ ಚೀನಾದಲ್ಲಿ ಇಲ್ಲ. ಇಲ್ಲಿ ಎಲ್ಲವೂ ನಾರ್ಮಲ್ ಇದೆ ಎಂದು ಅಲ್ಲಿನ ಜನರು ಸಹಜ ರೀತಿಯಲ್ಲಿ ಓಡಾಡುತ್ತಿರುವುದನ್ನು ತೋರಿಸಿದ್ದಾರೆ. ಆಸ್ಪತ್ರೆಯೊಂದರ ಎಮರ್ಜೆನ್ಸಿ ಬೋರ್ಡನ್ನು ತೋರಿಸಿ ಇಲ್ಲಿ ಯಾವುದೇ ದಟ್ಟಣೆ ಇಲ್ಲ. ರೋಗಿಗಳು ಸಾಲುಗಟ್ಟಿದ್ದೂ ಇಲ್ಲವೆಂದು ಅಲ್ಲಿನ ಸ್ಥಿತಿಯನ್ನು ತೋರಿಸಿದ್ದಾರೆ. ಕನ್ನಡ ಟಿವಿ ಮಾಧ್ಯಮಗಳಲ್ಲಿ ಬರುವ ಸುದ್ದಿ ಸುಳ್ಳು ಎಂದಿದ್ದಾರೆ.

ಮತ್ತೊಬ್ಬರು ಕನ್ನಡತಿ ಅಸೀಮಾ ಧೋಳ ಅವರು ಕೂಡ ಚೀನಾದ ವುಹಾನ್ ನಗರದಿಂದ ವಿಡಿಯೋ ಮಾಡಿದ್ದಾರೆ. ಅಲ್ಲಿ ಉನ್ನತ ಅಧ್ಯಯನ ನಡೆಸುತ್ತಿರುವ ಅಸೀಮಾ, ಅಲ್ಲಿನ ಸೂಪರ್ ಮಾರ್ಕೆಟ್ ಇನ್ನಿತರ ಜಾಗಗಳಿಗೆ ತೆರಳಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಮಾಸ್ಕ್ ಹಾಕದೆ ಜನ ತಿರುಗಾಡುತ್ತಿರುವುದು, ರಸ್ತೆಯಲ್ಲಿ ಗುಂಪಾಗಿ ತೆರಳುತ್ತಿರುವುದನ್ನು ತೋರಿಸಿದ್ದಾರೆ. ಕನ್ನಡದ ಮಾಧ್ಯಮಗಳು ಮಾತ್ರ ಚೀನಾದ ಸ್ಥಿತಿಯ ಬಗ್ಗೆ ತಮಗೆ ಗೊತ್ತಿಲ್ಲದ ಸುದ್ದಿಗಳನ್ನು ಬಿತ್ತರಿಸುತ್ತಿದ್ದಾರೆ ಎಂದವರು ಹೇಳಿದ್ದಾರೆ.
No emergecy in China, Kannadigas from china slams Media for creating fear among people, all normal video goes viral. Kannada Media channels have been reporting that there is emergency in china and hospitals are filled with patients due to HMPV Virus. Kannada YouTuber in china Shashi Shiraguppi has made a clear video of the city.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am