ಬ್ರೇಕಿಂಗ್ ನ್ಯೂಸ್
09-01-25 04:21 pm HK News Desk ಕರ್ನಾಟಕ
ಹಾಸನ, ಜ 09: ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವೇಳೆ ನಗರ ಸಭೆ ಸದಸ್ಯರು ಅಧಿಕಾರಿಗಳ ರಕ್ಷಣೆಗೆ ಬಂದಿದ್ದಾರೆ. ಆಗ ಲೋಕಾಯುಕ್ತ ಇನ್ಸ್ಪೆಕ್ಟರ್, ನಗರಸಭೆ ಸದಸ್ಯರಿಗೆ ಚಳಿಬಿಡಿಸಿದ್ದಾರೆ.
ಒಂದುವರೆ ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ?
ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು. ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ ನೀಡಲು ಒಂದುವರೆ ಲಕ್ಷಕ್ಕೆ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರೆ ಎನ್ನುವ ಆರೋಪ ಅಧಿಕಾರಿಗಳ ಮೇಲೆ ಇದೆ.

ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಸ್ವಚ್ಛತೆಗೆ ಟೆಂಡರ್ ನೀಡಲಾಗಿತ್ತು. ಒಟ್ಟು 10 ಲಕ್ಷದ 50 ಸಾವಿರ ಬಿಲ್ ಹಣ ನೀಡಲು ಒಂದುವರೆ ಲಕ್ಷ ಹಣ ಲಂಚ ನೀಡಬೇಕು ಎಂದು ನಗರಸಭೆ ಆಯುಕ್ತ ಹಾಗೂ ಕೆ.ಆರ್.ವೆಂಕಟೇಶ್ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ಇಂದು ಲೋಕಾಯುಕ್ತ ಇನ್ಸ್ಪೆಕ್ಟರ್ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಹಾಸನ ನಗರಸಭೆಯ ಕೆ.ಆರ್.ವೆಂಕಟೇಶ್ ಕಚೇರಿಯಲ್ಲಿ ಲಂಚ ಪಡೆಯುವಾಗ ಹಣದ ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಅಧಿಕಾರಿಗಳ ರಕ್ಷಣೆಗೆ ನಿಂತ ನಗರಸಭೆ ಸದಸ್ಯರು ;
ಈ ವೇಳೆ ಅಧಿಕಾರಿಗಳ ರಕ್ಷಣೆಗೆ ನಿಂತ ನಗರಸಭೆ ಸದಸ್ಯರು, ಕೆ.ಆರ್ ವೆಂಕಟೇಶ್ ಅವರ ಪಾತ್ರ ಏನೂ ಇಲ್ಲ. ಆಯುಕ್ತರ ಸೂಚನೆ ಮೇರೆಗೆ ಹಣ ಪಡೆದಿದ್ದಾರೆ ಎಂದು ಲೋಕಾಯುಕ್ತ ಅಧಿಕಾರಿಗಳ ಮುಂದೆ ವಾದ ಮಾಡಿದ್ದಾರೆ.
ನಾವು ಅಮಾಯಕರ ಮೇಲೆ ದಾಳಿ ಮಾಡಿಲ್ಲ ;
ಆಗ ಲೋಕಾಯುಕ್ತ ಇನ್ಸ್ಪೆಕ್ಟರ್ ಬಾಲು ಅವರು, ಸದಸ್ಯರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ನಾವು ಅಮಾಯಕರ ಮೇಲೆ ದಾಳಿ ಮಾಡಿಲ್ಲ. ಹಣ ಸ್ವೀಕರಿಸಿರುವ ವೆಂಕಟೇಶ್ ಅವರೂ ಕೂಡ ಆರೋಪಿ, ನಮ್ಮ ಲೋಕಾಯುಕ್ತ ಕಾನೂನು ಏನು ಹೇಳುತ್ತದೆ ಅದೇ ರೀತಿ ಕ್ರಮವಹಿಸುತ್ತೇವೆ. ನೀವು ಆಯುಕ್ತರ ಸೂಚನೆಗೆ ಹಣ ಪಡೆದಿದ್ದಾರೆ ಎನ್ನುತ್ತಿದ್ದೀರಿ. ಮೊದಲು ಕೆಳ ಅಧಿಕಾರಿಗಳಿಗೆ ಆಯುಕ್ತರ ಮಾತು ಕೇಳೋದನ್ನ ಕಡಿಮೆ ಮಾಡಲು ಹೇಳಿ ಎಂದು ಇನ್ಸ್ಪೆಕ್ಟರ್ ಬಾಲು ತಿರುಗೇಟು ಕೊಟ್ಟರು. ಬಾಲು ಹೇಳಿಕೆಯಿಂದ ಮುಜುಗರಕ್ಕೊಳಗಾಗಿ ನಗರಸಭೆ ಸದಸ್ಯರು ಮತ್ತು ಸಿಬ್ಬಂದಿ ಹೊರ ನಡೆದರು.
Two officers arrested by lokayukta officlas for demanding bribe to release bill amount in Hassan temple feast.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 12:44 pm
HK News Desk
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
11-04-26 03:09 pm
Mangalore Correspondent
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm