ಬ್ರೇಕಿಂಗ್ ನ್ಯೂಸ್
09-01-25 07:04 pm HK News Desk ಕರ್ನಾಟಕ
ರಾಮನಗರ, ಜ.09: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲುದೊಡ್ಡಿ ಗ್ರಾಮದ ಬಳಿ ನಡೆದಿದೆ.
ಮೃತ ಮಕ್ಕಳನ್ನು ತಮಿಳುನಾಡಿನ ಡೆಂಕಣಿಕೋಟೆಯ ಬೋಕಸಂದ್ರ ಗ್ರಾಮದ ಭೈರಪ್ಪ ಎಂಬವರ ಮಕ್ಕಳಾದ ಪ್ರದೀಪ್ (5), ಭವ್ಯ (3) ಎಂದು ಗುರುತಿಸಲಾಗಿದೆ
ಕಳೆದ ಒಂದು ವರ್ಷದ ಹಿಂದೆ ತಮಿಳುನಾಡಿನಿಂದ ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರೊಡನೆ ಇಲ್ಲಿಗೆ ಬಂದು ವಾಸವಾಗಿದ್ದರು. ಇಂದು ಬೆಳಿಗ್ಗೆ ಗೋವಿಂದ ಹಾಗೂ ಮಧು ಎಂಬವರ ಜೊತೆ ತನ್ನ ಇಬ್ಬರು ಮಕ್ಕಳನ್ನು ಬೈಕ್ನಲ್ಲಿ ಸಂಬಂಧಿಕರ ಮನೆಗೆ ಕಳುಹಿಸಿದ್ದಾರೆ. ಈ ವೇಳೆ ಅಚ್ಚಲುದೊಡ್ಡಿ ಗ್ರಾಮದ ರಸ್ತೆ ತಿರುವಿನಲ್ಲಿ ಬೈಕ್ಗೆ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಇನ್ನೂ ಅಪಘಾತಕ್ಕೆ ರಸ್ತೆ ತಿರುವಿನಲ್ಲಿರುವ ಗಿಡಗೆಂಟೆಗಳನ್ನು ತೆರವು ಮಾಡದಿರುವುದೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ತಿರುವಿನಲ್ಲಿ ಎದುರಿಗೆ ಬರುವ ವಾಹನಗಳು ಗೊತ್ತಾಗದೇ ಅಪಘಾತ ಸಂಭವಿಸಿದೆ. ಜೊತೆಗೆ ಕೆಎಸ್ಆರ್ಟಿಸಿ ಬಸ್ಗಳ ವೇಗಕ್ಕೆ ಮಿತಿ ಇಲ್ಲ, ಅತಿ ವೇಗವಾಗಿ ಬಸ್ ಚಲಾವಣೆ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ದೂರಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two kids killed on spot after KSRTC bus rams bike at Ramnagara. The deceased has been identified as Pradeep (5) and Bhavaya (3).
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm